ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ‘ಸೆಟಲ್‌ಮೆಂಟ್’ ಕೇಂದ್ರಗಳಾಗಿವೆ: ಹೈಕೋರ್ಟ್ ಅಸಮಾಧಾನ

Date:

ಪೊಲೀಸ್ ಠಾಣೆಗಳಲ್ಲಿ ಸಿವಿಲ್‌ ವ್ಯಾಜ್ಯಗಳನ್ನು ‘ಸೆಟಲ್‌ಮೆಂಟ್‌’ ಮಾಡುವ ಪೊಲೀಸರ ಧೋರಣೆಯನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಹೈಕೋರ್ಟ್‌, “ಠಾಣೆಗಳು ರಿಯಲ್‌ ಎಸ್ಟೇಟ್‌ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ” ಎಂದು ಅಸಮಾಧಾನ ಹೊರಹಾಕಿದೆ.

‘ಈ ಬಗ್ಗೆ ಕೋರ್ಟ್ ಪದೇ ಪದೇ ಸೂಚನೆ ನೀಡುತ್ತಿದ್ದರೂ ಪೊಲೀಸ್ ಠಾಣೆಗಳು ಮಾತ್ರ ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸುತ್ತಲೇ ಇವೆ’ ಎಂದು ಖಡಕ್ ಅಭಿಪ್ರಾಯ ನೀಡಿದೆ.

‘ಖಾಸಗಿ ವ್ಯಕ್ತಿಗಳು ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಬಾಣಸವಾಡಿ ಠಾಣಾ ಪೊಲೀಸರು ನೆರವು ನೀಡುತ್ತಿದ್ದಾರೆ’ ಎಂದು ಆರೋಪಿಸಿ ಬೆಂಗಳೂರಿನ ಗೆದ್ದಲಹಳ್ಳಿ ನಿವಾಸಿ ಜುವಿತ್ತಾ ರವಿ ಎಂಬುವವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹೀಗೆ ತರಾಟೆಗೆ ತೆಗೆದುಕೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಾಣಸವಾಡಿ ಎಸಿಪಿ ಖುದ್ದು ಹಾಜರಾಗಲು ಸೂಚಿಸಿದ ಹೈಕೋರ್ಟ್‌
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಿವಿಲ್‌ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರಿಗೆ ಪೊಲೀಸರು ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ’ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌, “ಠಾಣೆಗಳು ರಿಯಲ್‌ ಎಸ್ಟೇಟ್‌ ವ್ಯವಹಾರಸ್ಥರ ಸೆಟಲ್‌ಮೆಂಟ್‌ ಮಾಡುವ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಸಿವಿಲ್‌ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ಪದೇ ಪದೇ ಆದೇಶಿಸಿದ್ದರೂ ಪೊಲೀಸರು ಮಾತ್ರ ಅದನ್ನು ಉಲ್ಲಂಘಿಸುತ್ತಲೇ ಇದ್ದಾರೆ” ಎಂದು ಅಸಮಾಧಾನ ಹೊರಹಾಕಿತು.

ಅಲ್ಲದೆ, ಪ್ರಕರಣ ಕುರಿತಂತೆ ಬಾಣಸವಾಡಿ ಸಹಾಯಕ ಪೊಲೀಸ್‌ ಆಯುಕ್ತರು ನವೆಂಬರ್ 29ರಂದು ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಏನಿದು ಪ್ರಕರಣ?
ಕೆಲವು ಖಾಸಗಿ ವ್ಯಕ್ತಿಗಳು ನನ್ನಿಂದ 12 ಲಕ್ಷ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸರು 2023ರ ನವೆಂಬರ್ 21ರಂದು ಠಾಣೆಗೆ ಕರೆದೊಯ್ದು ಹಣ ಪಾವತಿಸಲು ಸೂಚಿಸುತ್ತಿದ್ದರು.

ನವೆಂಬರ್ 25ರಂದು ಚೆಕ್‌ ಸಮೇತ ಠಾಣೆಗೆ ಹಾಜರಾಗಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಕೋರ್ಟಿನಲ್ಲಿ ಆಗಬೇಕಾದ ಕಾರ್ಯವನ್ನು ಪೊಲೀಸರೇ ಮುಂದಾಳತ್ವ ವಹಿಸಿ ಮಾಡುತ್ತಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು, ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

ಸಿವಿಲ್‌ ಹಾಗೂ ಹಣಕಾಸಿಗೆ ಸಂಬಂಧಿಸಿದ ಪ್ರಕರಣಗಳನ್ನು ಠಾಣೆಯಲ್ಲಿ ‘ಸೆಟಲ್‌ಮೆಂಟ್‌’ ಮಾಡುವ ಪೊಲೀಸರ ಕಾರ್ಯವೈಖರಿಯಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತಿದೆ. ಆದ್ದರಿಂದ ಪ್ರಕರಣ ಸಂಬಂಧ ಅರ್ಜಿದಾರರು ನವೆಂಬರ್ 22ರಂದು ನೀಡಿರುವ ಮಾಹಿತಿ ಪರಿಗಣಿಸಿ, ಕಾನೂನು ಪ್ರಕಾರ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರ ಮತ್ತು ನಗರ ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿ ಇತ್ಯರ್ಥವಾಗುವರೆಗೆ ಅರ್ಜಿದಾರರರು ಅಥವಾ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್...

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ...

ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

"ಒಂದೋ ವಿಚಾರಣೆಗೆ ಹಾಜರಾಗಿ, ಇಲ್ಲವೇ ಸೂಕ್ತ ಕ್ರಮ ಎದುರಿಸಲು ಸಿದ್ಧರಾಗಿ"...ಹೀಗಂತ ಹೇಳಿದ್ದು...