ತುಮಕೂರು | ವಿಮೋಚನೆಯ ಹೊಸ ಹಾದಿ ತೆರೆದ ಕೃತಿ ‘ಕವಿರಾಜಮಾರ್ಗ’: ಬರಗೂರು ರಾಮಚಂದ್ರಪ್ಪ

Date:

126 ವರ್ಷಗಳ ಹಿಂದೆ ಕೆ.ಬಿ ಪಾಠಕ್‌ ಅವರು ಸಂಪಾದಿಸಿ, ಪರಿಷ್ಕರಿಸಿ ಹೊರತಂದ ‘ಕವಿರಾಜಮಾರ್ಗ’ವು ಕನ್ನಡ ಸಾಹಿತ್ಯ ನೆಲೆಯನ್ನು ಕಟ್ಟಿಕೊಡುವ ಕೆಲಸವನ್ನು ಈಗಲೂ ಮಾಡುತ್ತಿದೆ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ವಿಭಾಗವು ಆಯೋಜಿಸಿದ್ದ ’ಶ್ರೀವಿಜಯ ವಿರಚಿತ ಕವಿರಾಜಮಾರ್ಗ-125’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಗ್ರಂಥ ಸಂಪಾದನೆ ಎನ್ನುವುದು ಯಾವುದೇ ಪ್ರಕಾರದ ಸಾಹಿತ್ಯ ನೆಲೆಯನ್ನು ಕಟ್ಟಿಕೊಡುವ ಕೆಲಸವಾಗಬೇಕು. ಕವಿರಾಜಮಾರ್ಗ ಕನ್ನಡಕಟ್ಟುವ, ಸಂಸ್ಕೃತದ ನೆಲೆಯಿಂದ ತನ್ನನ್ನು ವಿಭಜಿಸಿಕೊಂಡು, ಸಾಮಾಜಿಕ ಬಲಾಢ್ಯತೆಯಿಂದ ಹಳೆಗನ್ನಡದ ಓದನ್ನು ಕುಗ್ಗಿಸದೆ, ಪರಧರ್ಮ ಸಹಿಷ್ಣುತೆ, ಸಾಮಾಜಿಕ ಪರಂಪರೆಯನ್ನು ಸಾರುವ ಜನಸಾಮಾನ್ಯರ ಕೃತಿಯಾಗಿ, ತಾತ್ವಿಕ ಬೀಜ ಬಿತ್ತುವುದರ ಮೂಲಕ ಇಂದಿಗೂ ತನ್ನ ಸತ್ವ ಪ್ರಶಂಸೆಯನ್ನು ಸಾರುತ್ತಿದೆ” ಎಂದು ತಿಳಿಸಿದರು.

“ಕವಿರಾಜಮಾರ್ಗವು ಕಾವ್ಯಾಲಂಕಾರವೂ ಹೌದು, ಲಾಕ್ಷಣಿಕ ಗ್ರಂಥವೂ ಹೌದು.ನಿರ್ವಚನಗೊಳಿಸುವ ಕೃತಿಎಂದೇ ಹೇಳಬಹುದು.ಚಾರಿತ್ರಿಕ ಮಹತ್ವ, ಸಮಕಾಲೀನ ದೃಷ್ಟಿಯಿಂದ ನೋಡಿದಾಗ ಸಾಹಿತ್ಯ ಕೃತಿಗೆ, ಕಾವ್ಯಕ್ಕೆಇರಬೇಕಾದಎಲ್ಲ ಅಂಶಗಳನ್ನು ಸಾರುವ, ಹಳೆಗನ್ನಡದ ಮೆರುಗನ್ನು ವ್ಯಕ್ತಪಡಿಸುವ ಏಕೈಕ ಕೃತಿಯಾಗಿದೆ.ಭಾಷಿಕ, ಧಾರ್ಮಿಕ, ಸಾಮಾಜಿಕ ವಿಮೋಚನೆಯ ಹೊಸ ಹಾದಿ ತೆರೆದ ಕೃತಿಯಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕನ್ನಡದ ಜಾಯಮಾನಕ್ಕೆ ಹೊಂದಿಕೊಳ್ಳುವ ಸಂಸ್ಕೃತ ಪದಗಳನ್ನು ಬಳಸಬಹುದು.ಭಾಷಾ ಸೌಂದರ್ಯವನ್ನು ಹೆಚ್ಚಿಸಲು, ಪದ ಬಳಕೆ ಸಹಜ ಹೊಂದಾಣಿಕೆಯಾದಾಗ ಇತರೆ ಭಾಷಾ ಪದಗಳನ್ನು ಅಳವಡಿಸಿಕೊಂಡಾಗ ಆಧುನಿಕ ವಿವೇಕ ಹೊಂದಿ, ಭಾಷೆಯ, ಸಮಾಜದ ಮೇಲಿನ ಗೌರವ ಬಹುತ್ವರೂಪು ಪಡೆದು ಬಹುತ್ವದ ಪರಿಕಲ್ಪನೆ ನೆಲೆಗೊಳ್ಳುತ್ತದೆ. ಆಗ ಭಾಷೆಯು ಸಾಮಾಜಿಕ ಉತ್ಪನ್ನದ ಪ್ರಾದೇಶಿಕ, ಸಾಂಸ್ಕೃತಿಗಳ ಕುರಿತು ಮಾತನಾಡುತ್ತದೆ” ಎಂದು ಹೇಳಿದರು.

ವಿವಿ ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಮಾತನಾಡಿ, “ವಿಶ್ವವಿದ್ಯಾನಿಲಯಗಳ ಬಲವನ್ನು ನಿರೂಪಿಸಲು ಸಾಧ್ಯವಾಗುವುದು ಕನ್ನಡ ವಿಭಾಗದ ಮಹತ್ವದಿಂದ.ಕನ್ನಡ ವಿಭಾಗಗಳು ಪ್ರಾದೇಶಿಕತೆಯನ್ನು ಕಟ್ಟುವ, ಸಾರುವ ಪ್ರತಿನಿಧಿಗಳಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ ಎಂ.ಶೇಟ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೆಂಕಟರೆಡ್ಡಿರಾಮರೆಡ್ಡಿ, ರಾಷ್ಟ್ರೀಯ ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ.ನಾಗಭೂಷಣ ಬಗ್ಗನಡು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...

ಧಾರವಾಡ | ಸಚಿವ ಸಂತೋಷ್‌ ಲಾಡ್‌ಗೆ ವಿಜಯೇಂದ್ರ ಅಪಮಾನ; ಕ್ಷಮೆ ಯಾಚಿಸಲು ಆಗ್ರಹ

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕೀಳು ಮಟ್ಟದ ಪದ ಬಳಸಿ ಸಚಿವ...