ತೆಲಂಗಾಣ | ಚುನಾವಣೆ ಘೋಷಣೆಗೂ ಮುನ್ನವೇ ಬಹುತೇಕ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಕೆಸಿಆರ್

Date:

ತೆಲಂಗಾಣ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಬಾಕಿ ಇರುವ ಮುನ್ನವೇ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ತಮ್ಮ ಬಿಆರ್‌ಎಸ್‌ ಪಕ್ಷದ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ತೆಲಂಗಾಣದ ಒಟ್ಟು 119 ಕ್ಷೇತ್ರಗಳಲ್ಲಿ 115 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆಗೊಳಿಸಲಾಗಿದೆ. ಬೋತ್, ಖಾನಾಪುರ, ವೈರಾ, ಕೋರುಟ್ಲಾ, ಉಪ್ಪಲ್, ಆಸಿಫಾಬಾದ್ ಮತ್ತು ಮೆಟ್ಪಲ್ಲಿ ಕ್ಷೇತ್ರಗಳಿಗೆ ಹೊಸಬರನ್ನು ಘೋಷಿಸಿರುವುದನ್ನು ಬಿಟ್ಟರೆ 108 ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕಿಳಿಸಲಾಗುತ್ತಿದೆ.

ಗೋಶಾಮಹಲ್, ನಾಂಪಲ್ಲಿ, ಜನಾಂವ್ ಮತ್ತು ನರಸಾಪುರ ಎಂಬ ನಾಲ್ಕು ಕ್ಷೇತ್ರಗಳಿಗೆ ಪಕ್ಷವು ಇನ್ನೂ ಅಭ್ಯರ್ಥಿಗಳನ್ನು ನಿರ್ಧರಿಸಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ – ತಮಿಳುನಾಡು ಕಾವೇರಿ ನದಿ ವಿವಾದ: ನೀರು ಹಂಚಿಕೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ

115 ಕ್ಷೇತ್ರಗಳ ಪೈಕಿ ಆರು ಮಹಿಳೆಯರಿಗೆ ಬಿಆರ್‌ಎಸ್ ಪಕ್ಷ ಟಿಕೆಟ್ ನೀಡಿದೆ. ಪದ್ಮಾ, ಜಿ. ಲಾಸ್ಯ, ನಂದಿತಾ, ಕೋವ ಲಕ್ಷ್ಮಿ, ಬಾನೋತ್ ಹರಿಪ್ರಿಯಾ ನಾಯ್ಕ್, ಬಡೇ ನಾಗಜ್ಯೋತಿ, ಮತ್ತು ಗೊಂಗಿಡಿ ಸುನೀತಾ ಅವರಿಗೆ ಕ್ರಮವಾಗಿ ಸಿಕಂದರಾಬಾದ್ ಕಂಟೋನ್ಮೆಂಟ್, ಆಸಿಫಾಬಾದ್, ಯಲ್ಲಂಡು, ಮುಲುಗು ಮತ್ತು ಅಲೈರ್‌ನಿಂದ ಟಿಕೆಟ್ ನೀಡಲಾಗಿದೆ. ರಾಜ್ಯದ 30 ಕ್ಷೇತ್ರಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್ 95-105 ಸ್ಥಾನಗಳನ್ನು ಗೆಲ್ಲಲಿದೆ. ಎಐಎಂಐಎಂ ಮತ್ತು ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿಯೊಂದಿಗೆ ಬಿಆರ್‌ಎಸ್ ಸ್ನೇಹ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್ ತಿಳಿಸಿದ್ದಾರೆ.

2018ರ ಚುನಾವಣೆಯಲ್ಲಿ 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಬಿಆರ್‌ಎಸ್ 88 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಕಾಂಗ್ರೆಸ್ ಮತ್ತು ಎಐಎಂಐಎಂ ಕ್ರಮವಾಗಿ 19 ಮತ್ತು 7 ಸ್ಥಾನಗಳನ್ನು ಗಳಿಸಿದ್ದವು. ಬಿಜೆಪಿ ಕೇವಲ 1 ಸ್ಥಾನವನ್ನು ಪಡೆದಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ಮತದಾರರಿಗೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಬೆಂಗಳೂರು...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...