ಎಲ್‌ಕೆಜಿ ಪ್ರವೇಶ | ನಾಲ್ಕು ವರ್ಷ ವಯಸ್ಸು ಕಡ್ಡಾಯ

Date:

  • ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕು
  • ಶಿಕ್ಷಣ ಇಲಾಖೆಯ ನಿಯಮ ಅವೈಜ್ಞಾನಿಕ; ಪೋಷಕರ ಆಕ್ಷೇಪ

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಾಲ್ಕು ವರ್ಷ ತುಂಬಿದ ಮಕ್ಕಳು ಮಾತ್ರ ಶಿಶಿವಿಹಾರ (ಎಲ್‌ಕೆಜಿ) ಸೇರಲು ಅರ್ಹರು ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಒಂದನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಡ್ಡಾಯವಾಗಿ ಆರು ವರ್ಷ ತುಂಬಿರಬೇಕು ಎಂಬ ನಿಯಮ 2025-26ನೇ ಸಾಲಿನಿಂದ ಜಾರಿಯಾಗಲಿದೆ. ಈ ಕಾರಣದಿಂದ 2023-24ನೇ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸಲು ಬರುವ ಜೂನ್‌ 1ಕ್ಕೆ ಕಡ್ಡಾಯವಾಗಿ ನಾಲ್ಕು ವರ್ಷ ತುಂಬಿರಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ.

2025-26ಕ್ಕೆ ಒಂದನೇ ತರಗತಿಗೆ ದಾಖಲಾಗಲಿದ್ದಾರೆ. ಹಾಗಾಗಿ, ಆ ವೇಳೆಗೆ ಮಕ್ಕಳ ದಾಖಲಾತಿಗೆ ವಯಸ್ಸಿನ ಸಮಸ್ಯೆ ಆಗದಿರಲು ಪೂರ್ವ ಪ್ರಾಥಮಿಕ ಶಿಕ್ಷಣ ಪ್ರವೇಶಕ್ಕೂ ಇಲಾಖೆ ವಯೋಮಿತಿ ನಿಗದಿಪಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಶಿಕ್ಷಣ ಹಕ್ಕು ಕಾಯ್ದೆ-2009’ ಮತ್ತು ‘ಕಡ್ಡಾಯ ಶಿಕ್ಷಣ ನಿಯಮ’ದಂತೆ ಈಗಾಗಲೇ ಆದೇಶಿಸಿರುವಂತೆ 2025-26ನೇ ಸಾಲಿನಿಂದ ಒಂದನೇ ತರಗತಿ ದಾಖಲಾತಿಗೆ ಮಗುವಿಗೆ ಆರು ವರ್ಷ ತುಂಬಿರಬೇಕೆಂಬ ನಿಯಮದಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಇರುವುದಿಲ್ಲ.

ಈ ಸುದ್ದಿ ಓದಿದ್ದೀರಾ?: ಮೋದಿ ರೋಡ್ ಶೋ | ನೀಟ್‌ ಬರೆಯುವವರಿಗೆ ಪರೀಕ್ಷಾ ಕೇಂದ್ರ ತಲುಪುವುದೇ ಅಗ್ನಿ ಪರೀಕ್ಷೆ

ಪ್ರಸಕ್ತ ವರ್ಷದ ಶೈಕ್ಷಣಿಕ ಸಾಲಿನಿಂದ ಮಕ್ಕಳನ್ನು ಶಿಶುವಿಹಾರಕ್ಕೆ ದಾಖಲಿಸುವ ಪೋಷಕರು ನಾಲ್ಕು ವರ್ಷ ವಯಸ್ಸು ಪೂರ್ಣಗೊಂಡಿರುವವರನ್ನು ಮಾತ್ರ ಎಲ್‌ಕೆಜಿಗೆ ದಾಖಲಿಸಬೇಕು. ಎಲ್‌ಕೆಜಿ, ಯುಕೆಜಿ ಮುಗಿಸಿದ್ದರೂ ವಯಸ್ಸು ಆರು ವರ್ಷ ಪೂರ್ಣಗೊಳ್ಳದೆ ಇದ್ದರೆ, ಒಂದನೇ ತರಗತಿಗೆ ಪ್ರವೇಶವಿಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ.

ಶಿಕ್ಷಣ ಇಲಾಖೆ ಎಲ್‌ಕೆಜಿಗೆ 4 ವರ್ಷದ ವಯೋಮಿತಿ ನಿಗದಿಪಡಿಸಿರುವುದಕ್ಕೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲಾಖೆಯ ಈ ನಿರ್ಧಾರ ಅವೈಜ್ಞಾನಿಕ. ಜೂನ್‌ 1ಕ್ಕೆ ನಿಗದಿತ ವಯಸ್ಸು ತುಂಬಲು ಒಂದು ದಿನ ಕಡಿಮೆ ಇದ್ದರೂ ಅಂತಹ ಮಕ್ಕಳಿಗೆ ಪ್ರವೇಶ ಸಿಗುವುದಿಲ್ಲ. ಇದರಿಂದ ಮಕ್ಕಳು ಇನ್ನೂ ಒಂದು ವರ್ಷ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ. ಈ ಹಿಂದೆ ಇದ್ದಂತೆ ಎಲ್‌ಕೆಜಿ ದಾಖಲಾತಿಗೆ 3 ವರ್ಷ 10 ತಿಂಗಳಿಂದ 4 ವರ್ಷ 10 ತಿಂಗಳು, 1ನೇ ತರಗತಿಗೆ 5 ವರ್ಷ 10 ತಿಂಗಳಿಂದ 6 ವರ್ಷ 10 ತಿಂಗಳವರೆಗೆ ಎಲ್‌ಕೆಜಿಗೆ ದಾಖಲಿಸಬಹುದಾದ ನಿಯಮವೇ ಇರಲಿ. ವಯೋಮಾನ ಸಡಿಲಿಕೆಯ ಅವಕಾಶ ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...