ಪಂಚರಾಜ್ಯಗಳ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಅಂಬಿಕಾಪತಿ, ಬಿಲ್ಡರ್ ಸಂತೋಷ್ ಕೃಷ್ಣಪ್ಪ ಅವರ ಮನೆಯಲ್ಲಿ ಸಿಕ್ಕ ಹಣವೇ ಇದಕ್ಕೆ ಸಾಕ್ಷಿ. ಹಾಗಾಗಿ, ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ ಎಂದು ಮಾಜಿ ಸಚಿವ ಸಿಟಿ ರವಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಮುಕ್ತವಾದ ಸರ್ಕಾರ ಅಂತ ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ ಅವರ ಮೂಗಿನ ಕೆಳಗೆ ಈ ರೀತಿ ಘಟನೆ ನಡೆದಿದೆ. ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ. 42 ಕೋಟಿ ಈಗ ಸಿಕ್ಕಿದೆಯಲ್ವಾ ಅದಕ್ಕೆ ಮೊದಲು ಉತ್ತರ ಕೊಡಿ’ ಎಂದು ಆಗ್ರಹಿಸಿದ್ದಾರೆ.
ಪತ್ತೆಯಾದ ಹಣದ ಬಗ್ಗೆ ಸಿಬಿಐ ತನಿಖೆ ಆಗಲೇಬೇಕು. 100 ಜನ ಬೇನಾಮಿ ಈ ಹಣಕ್ಕೆ ಇದ್ದಾರೆ. ಇಬ್ಬರು ಸಿಕ್ಕಿದ್ದಾರೆ. ಉಳಿದ 98 ಜನ ಬೇನಾಮಿಯ ಹೆಸರು ಹೊರ ಬರಬೇಕು. ಲೋಕಸಭಾ ಚುನಾವಣೆಗೆ 2 ಸಾವಿರ ಕೋಟಿ ಕೊಡುತ್ತೇನೆ ಅನ್ನೋದು ಚರ್ಚೆ ಆಗುತ್ತಿದೆ. ಬ್ರಾಂಡ್ ಬೆಂಗಳೂರು ಅಂದ್ರೆ ಭ್ರಷ್ಟ ಬೆಂಗಳೂರನ್ನ ಮಾಡಿಕೊಳ್ಳಲು ಹೋಗುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಸಿ ಟಿ ರವಿ ಹರಿಹಾಯ್ದರು.
ಗುತ್ತಿಗೆದಾರರ ಮನೆ ಮೇಲೆ ದಾಳಿ ಮಾಡಿದರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜಕೀಯ ಅಂತ ಹೇಳುತ್ತಾರೆ. ಐಟಿ ದಾಳಿ ಬಗ್ಗೆ ಪ್ರಿಯಾಂಗ್ ಖರ್ಗೆ ಕೂಡ ಪ್ರಶ್ನೆ ಮಾಡುತ್ತಾರೆ. ಹಾಗಾದರೆ 40, 42 ಕೋಟಿ ರೂಪಾಯಿ ಒಬ್ಬೊಬ್ಬರ ಮನೆಯಲ್ಲೂ ಸಿಕ್ಕಿದೆ ಅಲ್ವ, ಇದಕ್ಕೆ ಏನ್ ಹೇಳುತ್ತೀರಿ? ಹಾದಿಬೀದಿಯಲ್ಲಿ ಹೋಗುವವರ ಪ್ರಶ್ನೆಗೆ ಉತ್ತರಿಸಬೇಡಿ. ಈ ಹಣಕ್ಕೂ ನಿಮಗೂ ಸಂಬಂಧ ಇಲ್ಲವೆಂದಾದರೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಸಿಟಿ ರವಿ ಸವಾಲು ಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ಭಾಸ್ಕರ್ ರಾವ್ ಅವರು ಉಪಸ್ಥಿತರಿದ್ದರು.
Live : ಪತ್ರಿಕಾಗೋಷ್ಠಿ
ಉಪಸ್ಥಿತಿ : ಮಾಜಿ ಸಚಿವರಾದ ಶ್ರೀ @CTRavi_BJP, ಎಸ್. ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ @NswamyChalavadi, ಪ್ರಮುಖರಾದ ಶ್ರೀ @Nimmabhaskar22
ಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ
https://t.co/ZuUWag4W8G— BJP Karnataka (@BJP4Karnataka) October 15, 2023