ಕೆಪಿಎಸ್‌ಸಿ | ಅನ್ಯಾಯ ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಬಂಧನ ಖಂಡಿಸಿ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

Date:

“ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗ ಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ?” ಎಂದು ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಅವರಿಗೆ ಪ್ರಶ್ನಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿನಾಯಕ ಕಾಂತಕುಮಾರ್‌ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

“ಯುವಜನತೆಯ ಪರವಾಗಿ ನೀವಿದ್ದೀರಿ ಎಂದರೆ, ಕೂಡಲೇ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ವಿರುದ್ಧ ತನಿಖೆ ನಡೆಸಿ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್ವಿರುದ್ಧ ಕ್ರಮ ಕೈಗೊಳ್ಳಿ. ಸ್ಥಾನದಿಂದ ಅವರನ್ನು ಕೂಡಲೇ ಅಲ್ಲಿಂದ ತೆರವು ಮಾಡಿ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಿಂದಿನ ಅವಧಿಯ ಸರ್ಕಾರದ ವಿರುದ್ಧ ‘40% ಕಮಿಷನ್ಸರ್ಕಾರಎಂದು ಆರೋಪಿಸಿ, ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೀವಿ ಎಂಬ ವಾಗ್ದಾನವನ್ನು ನೀಡಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳನ್ನೇ ಬಂಧಿಸುವ ಹಂತಕ್ಕೆ ನಿಮ್ಮ ಸರ್ಕಾರ ಇಳಿದಿರುವುದು ಏಕೆ? ಸರ್ವಾಧಿಕಾರದ ಧೋರಣೆ ತಳೆದಿರುವುದು ಏಕೆ?” ಎಂದು ಪ್ರಶ್ನಿಸಿದ್ದಾರೆ.

“ಯುವನಿಧಿ ಯೋಜನೆ ಬಿಡುಗಡೆ ಸಂದರ್ಭ ಪದವಿ ಪಡೆದ ನಂತರ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಹುಡುಕಿಕೊಳ್ಳಲು ನಿರುದ್ಯೋಗಭತ್ಯೆ ಕೊಡುತ್ತಿದ್ದೇವೆ ಎಂದು ಘೋಷಣೆ ಮಾಡಿದ್ದೀರಿ. ಆದರೆ, ವಾಸ್ತವದಲ್ಲಿ ಭ್ರಷ್ಟಾಚಾರದಿಂದ ಅಭ್ಯರ್ಥಿಗಳ ಭವಿಷ್ಯವೇ ಹಾಳಾಗುತ್ತಿರುವುದು ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೇ? ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಹುದ್ದೆಗಳನ್ನು ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ ಎಂಬ ವಿದ್ಯಾರ್ಥಿ ನಾಯಕನ ಆರೋಪದಲ್ಲಿ ಹುರುಳಿಲ್ಲವೇ? ಹಾಗಿದ್ದರೆ ಫಲಿತಾಂಶ ಪ್ರಕಟಿಸಲು ವಿಳಂಬ ನೀತಿ ಅನುಸರಿಸುತ್ತಿರುವುದೇಕೆ?” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್ ಸ್ಪೋಟಗೊಂಡು ಏಳು ಜನರಿಗೆ ಗಂಭೀರ ಗಾಯ

“ಒಂದೊಂದು ಹುದ್ದೆಯ ಭರ್ತಿ ಮಾಡಲು ಒಂದು ವರ್ಷದ ಬದಲು ಐದು ವರ್ಷ ತೆಗೆದುಕೊಳ್ಳಲಾಗುತ್ತಿದೆ. 15 ನೋಟಿಫಿಕೇಶನ್ಗಳ ಪರೀಕ್ಷೆ ನಡೆದು ಎರಡು ವರ್ಷಗಳಾಗಿದೆ. ಆದರೆ, ಅದರ ಫಲಿತಾಂಶವನ್ನು ಕೆಪಿಎಸ್ಸಿ ಇನ್ನೂ ಪ್ರಕಟಿಸಿಲ್ಲ. ಇದು ಮೇಲ್ನೋಟಕ್ಕೆ ನೇಮಕಾತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದನ್ನು ಸಾರಿ ಹೇಳುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...