ಮಂಡ್ಯ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು

Date:

ದಲಿತ ಯುವಕನನ್ನು ಅಡ್ಡಗಟ್ಟಿ, ಜಾತಿ ನಿಂಧನೆ ಮಾಡಿ, ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ಹಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡಗೆರೆ ಗ್ರಾಮದ ದಲಿತ ಯುವಕ ಕಿರಣ್ ಜಿ ಎಂಬಾತ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬಸವನಪುರ ಗ್ರಾಮದ ಬಿ.ಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಬಸವನಪುರದ ಪ್ರಸನ್ನ ಹಾಗೂ ಇತರರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ 504, 506, 355, 149, 323, 324, 327ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರಿಗೆ ದೂರು ನೀಡಿರುವ ಕಿರಣ್, “ನನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಕಾರಿನಲ್ಲಿ ಬಂದ ಆರೋಪಿಗಳು ಬೈಕ್‌ಗೆ ಗುದ್ದುವ ರೀತಿಯಲ್ಲಿ ಬೆದರಿಸಿದ್ದಾರೆ. ಹಳೆಯ ದ್ವೇಷದಿಂದ ನಮ್ಮನ್ನು ತಡೆದು ನಿಲ್ಲಿಸಿ, ನನ್ನ ಕುತ್ತಿಗೆ ಹಿಡಿದು ಎಳೆದಾಡಿದ್ದಾರೆ. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ‘ನಮ್ಮನ್ನು ಎದುರು ಹಾಕಿಕೊಂಡು ಮರೆಯುತ್ತಿದ್ದೀಯಾ. ನಿನ್ನ ಕೊಲೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀನು ದಲಿತ ಜಾತಿಗೆ ಸೇರಿದವನೆಂದು ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನನ್ನನ್ನು ಕೆಡವಿ, ಚಪ್ಪಲಿ ಕಾಲಿನಿಂದ ನನ್ನ ಎದೆ, ಹೊಟ್ಟೆಗೆ ಒದ್ದಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನನ್ನ ಬಟ್ಟೆಯನ್ನು ಹರಿದು, ನಾನು ಕತ್ತಿನಲ್ಲಿ ಹಾಕಿದ್ದ 20 ಗ್ರಾಂ ಚಿನ್ನದ ಸರ ಹಾಗೂ ಜೇಬಿನಲ್ಲಿದ್ದ 50,000 ರೂಪಾಯಿಯನ್ನೂ ಕಿತ್ತುಕೊಂಡಿದ್ದಾರೆ. ಬರಿ ಚಡ್ಡಿಯಲ್ಲಿ 1 ಕಿ.ಮೀ ನಡೆಸಿಕೊಂಡು ಎಳೆದೊಯ್ದಿದ್ದಾರೆ” ಎಂದು ಕಿರಣ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು

“ಬಿ.ಪಿ ಗಿರೀಶ ಎಂಬಾತ ಗ್ರಾಮ ಪಂಚಾಯತಿ ಅಧ್ಯಕ್ಷನಾಗಿದ್ದು, ಆತ, ‘ನನಗೆ ರಾಜಕೀಯ ಬೆಂಬಲವಿದೆ. ನನ್ನ ಮೇಲೆ ಪ್ರಕರಣ ದಾಖಲಿಸಲು ಕೂಡ ಆಗುವುದಿಲ್ಲ. ನಾನು ಎಲ್ಲದರಿಂದ ಬಚಾವ್ ಆಗಬಲ್ಲೆ’ ಎಂದು ಹೇಳಿ, ಕಪಾಳಕ್ಕೆ ಹೊಡೆದಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ, ಕೊಲೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಿರಣ್ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪೆನ್‌ಡ್ರೈವ್ ಪ್ರಕರಣ; ಪ್ರಭಾವಿ ಕುಟುಂಬದ ಅಟ್ಟಹಾಸ ಮಟ್ಟಹಾಕಲು ಒಕ್ಕಲಿಗ ಸಮುದಾಯ ಮುಂದಾಗುವುದೇ?

ಹಾಸನ ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಪೆನ್‌ಡ್ರೈವ್ ಮುಖಾಂತರ ಅಶ್ಲೀಲ...

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...