ದೆಹಲಿಯ ಅಶೋಕ ಹೋಟೆಲ್ನಲ್ಲಿ ಇಂದು ಸಂಜೆ ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪವಾಗಿರುವುದಾಗಿ ವರದಿಯಾಗಿದೆ.
ಎನ್ಡಿಎ ಮೈತ್ರಿಕೂಟವನ್ನು ಸೋಲಿಸಬೇಕಾದರೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಯಲ್ಲಿ ಪ್ರಸ್ತಾಪ ಮಾಡಿರುವುದಾಗಿ ಸಭೆ ಮುಗಿದ ಬಳಿಕ ಕೆಲವು ನಾಯಕರು ಮಾಹಿತಿ ನೀಡಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ಟ್ವೀಟ್ ಮಾಡಿದೆ.
#WATCH | When asked about West Bengal CM and TMC leader Mamata Banerjee’s suggestion at the INDIA Alliance meeting, MDMK (Marumalarchi Dravida Munnetra Kazhagam) MP Vaiko says, “There was no opposition to that suggestion – Mallikarjun Kharge for PM face.” pic.twitter.com/yf6FmHdoyh
— ANI (@ANI) December 19, 2023
ಈ ಬಗ್ಗೆ ಇಂಡಿಯಾ ಮೈತ್ರಿಕೂಟ ಸಭೆಯ ಬಳಿಕ ನಡೆದ ಮಾಧ್ಯಮಗೋಷ್ಠಿಯ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಇಂಡಿಯಾ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ನಮಗೆ ಮೊದಲು ಸಂಸದರು ಗೆಲ್ಲುವುದು ಮುಖ್ಯ. ಸಂಸದರು ಗೆದ್ದು ಬಂದ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬಹುದು ಎಂಬುದರ ಕುರಿತು ಚರ್ಚಿಸುತ್ತೇವೆ. ಮೊದಲು ಮೈತ್ರಿಕೂಟದ ಸಂಸದರು ಗೆದ್ದು ಬರಲಿ. ಆಮೇಲೆ ನೋಡೋಣ” ಎಂದು ತಿಳಿಸಿದ್ದಾರೆ.