ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಮತ ಎಣಿಕೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ಅವಕಾಶ ಕೋರಿ ಮಂಗಳವಾರ ಹೈಕೋರ್ಟ್ ಮೊರೆ ಹೋಗಿದ್ದಾರೆ.
“ಮೇ 13ರಂದು ನಡೆದ ಮತ ಎಣಿಕೆ ಮುಗಿದ ಬಳಿಕ ಚುನಾವಣಾಧಿಕಾರಿಗಳು ನನಗೆ ಕರೆ ಮಾಡಿ, ʼನೀವು ಗೆಲುವು ಸಾಧಿಸಿದ್ದೀರಿʼ ಎಂದು ತಿಳಿಸಿದ್ದರು. ಬಳಿಕ ಕೆ.ವೈ ನಂಜೇಗೌಡ 248 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ ಎಂದು ಘೋಷಿಸಿದರು. ಇದು ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮರು ಮತ ಎಣಿಕೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದೇನೆ” ಎಂದು ಮಂಜುನಾಥಗೌಡ ತಿಳಿಸಿದ್ದಾರೆ.