- ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ
- ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ, ವರದಿ ನೀಡಲು ಸೂಚನೆ
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಎಲ್ಲ ಹಂತಗಳ ಮುಖಂಡರುಗಳನ್ನು ಸಂಪರ್ಕಿಸಿ ಸಭೆಗಳನ್ನು ಆಯೋಜಿಸಿ, ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿ ನೀಡಲು 28 ಲೋಕಸಭಾ ಕ್ಷೇತ್ರಗಳಿಗೂ ಸಚಿವರನ್ನು ವೀಕ್ಷಕರನ್ನಾಗಿ ಕಾಂಗ್ರೆಸ್ ನೇಮಕ ಮಾಡಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ 28 ಲೋಕಸಭಾ ಕ್ಷೇತ್ರಗಳಿಗೂ ಯಾವ ಯಾವ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂಬುದರ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ವೀಕ್ಷಕರಾಗಿ ನೇಮಕವಾದ ಸಚಿವರನ್ನು ತಮ್ಮ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಿ ಅನುದಾನಿತ ಉತ್ಸವಗಳೆಲ್ಲ ಸರಳಗೊಳ್ಳಲಿ
ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ಬಾಗಲಕೋಟೆ, ಡಾ. ಜಿ ಪರಮೇಶ್ವರ್ ಅವರನ್ನು ಬೆಂಗಳೂರು ಉತ್ತರ, ಸತೀಶ್ ಜಾರಕಿಹೊಳಿ ಅವರನ್ನು ವಿಜಯಪುರ, ಎಚ್ ಸಿ ಮಹದೇವಪ್ಪರನ್ನು ಚಿತ್ರದುರ್ಗ, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನಾಗಿ ಡಿಕೆ ಶಿವಕುಮಾರ್ ನೇಮಕ ಮಾಡಿದ್ದಾರೆ.
ಹಾಗೆಯೇ ಚಾಮರಾಜನಗರಕ್ಕೆ ದಿನೇಶ್ ಗುಂಡೂರಾವ್, ಕೋಲಾರಕ್ಕೆ ರಾಮಲಿಂಗಾರೆಡ್ಡಿ, ಉತ್ತರ ಕನ್ನಡಕ್ಕೆ ಎಚ್ ಕೆ ಪಾಟೀಲ, ದಾವಣಗೆರೆಗೆ ಈಶ್ವರ ಖಂಡ್ರೆ, ಹಾವೇರಿಗೆ ಎಸ್ ಎಸ್ ಮಲ್ಲಿಕಾರ್ಜುನ, ಹಾಸನಕ್ಕೆ ಎನ್ ಚಲುವರಾಯಸ್ವಾಮಿ, ತುಮಕೂರಿಗೆ ಕೃಷ್ಣಭೈರೇಗೌಡ, ಚಿಕ್ಕಬಳ್ಳಾಪುರಕ್ಕೆ ಜಮೀರ್ ಅಹಮದ್ ಖಾನ್ ವೀಕ್ಷಕರಾಗಿ ನೇಮಕವಾಗಿದ್ದಾರೆ.
ಸಚಿವರಾದ ಎಂ ಬಿ ಪಾಟೀಲ್, ರಹೀಂ ಖಾನ್, ಶರಣಬಸಪ್ಪ ದರ್ಶನಾಪುರ ಹಾಗೂ ಕೆ ಜೆ ಜಾರ್ಜ್ ಅವರಿಗೆ ಸದ್ಯಕ್ಕೆ ಯಾವುದೇ ಜವಾಬ್ದಾರಿ ನೀಡಿರುವುದಿಲ್ಲ.