ವಾರದ ಐದು ದಿನಗಳಲ್ಲಿ ಪ್ರಾಯೋಗಿಕವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) – ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಟ್ರಿಪ್ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್ಸಿಎಲ್, “ಬೆಳಗಿನ ಜನದಟ್ಟಣೆಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮವು ಸೆ.1 ರಿಂದ ಪ್ರಾಯೋಗಿಕವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ (ನೇರಳೆ ಮಾರ್ಗ) ವಾರದ ದಿನಗಳಲ್ಲಿ ಅಂದರೆ, ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ಗಳನ್ನು ನಡೆಸಲಿದೆ” ಎಂದು ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | 721 ಮೀ. ಸುರಂಗ ಮಾರ್ಗ ಕೊರೆದ ವಮಿಕ
“ಮಹಾತ್ಮಗಾಂಧಿ ರಸ್ತೆಯಿಂದ ಬೈಯಪ್ಪನಹಳ್ಳಿ ಕಡೆಗೆ ಹೋಗಲು ಬಯಸುವ ಪ್ರಯಾಣಿಕರು ಮಹಾತ್ಮಗಾಂಧಿ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಇಳಿದು ಬೈಯಪ್ಪನಹಳ್ಳಿ ಕಡೆಗೆ ತೆರಳುವ ರೈಲಿನಲ್ಲಿ ಪ್ರಯಾಣಿಸಬಹುದು. ಮೆಟ್ರೋ ಪಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು” ಎಂದು ಹೇಳಿದೆ.