ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮ ವರ್ಷಾಚರಣೆ ಅಂಗವಾಗಿ ಎಐಡಿಎಸ್ಒ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಇವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್ ಚಂದ್ರ ಬೋಸ್ ಹಾಗೂ ಮಹಾನ್ ಕ್ರಾಂತಿಕಾರಿಗಳ ಪಾತ್ರದ ಕುರಿತು ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ನಡೆಸಿದೆ ಎಂದು ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷೆ ಸ್ನೇಹ ಕಟ್ಟಿಮನಿ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ನಡೆದಿದ್ದ ಸ್ಪರ್ಧೆಗಳಲ್ಲಿ ಭಾವಹಿಸಿ, ವಿಜೇತವಾಗಿದ್ದವರಿಗೆ ಕಲಬುರಗಿಯ ಬೆತನಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು.
“ಭಾರತೀಯರ ಪರವಾಗಿ ನಿಂತು ಸ್ವಾತಂತ್ರ್ಯದ ಧೈಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ದನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಣಬುದು ಸುಭಾಷ್ ಚಂದ್ರ ಬೋಸರ ಹೇಳಿಕೆಯಾಗಿತ್ತು” ಎಂದು ತಿಳಿಸಿದ್ದಾರೆ.
“ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಸಮಾಜ ಅಧಃಪತನ ಹೊಂದುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡೊಯ್ಯುವುದು ಅತ್ಯವಶ್ಯಕವಾಗಿದೆ” ಎಂದರು.
ಕಾರ್ಯಕ್ರಮದಲ್ಲಿ ಯುವರಾಜ ತುಳಜರಾಮ ಇದ್ದರು.