ಕಾನೂನುಬಾಹಿರ ಚಟುವಟಿಕೆ; ಬೆಳ್ಳಂಬೆಳಗ್ಗೆ ಕರ್ನಾಟಕದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ

Date:

ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ 16 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಸ್ಥಳೀಯ ಪೊಲೀಸರ ನೆರವಿನಿಂದ ಶೋಧ ಕಾರ್ಯದಲ್ಲಿ ತೊಡಗಿದೆ.

ಹವಾಲಾ ಹಣಕ್ಕೆ ಸಂಬಂಧಿಸಿದ ಆರೋಪಗಳು ಮತ್ತು ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನ ಆರೋಪಗಳ ಹಿನ್ನೆಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದೇ ಪ್ರಕರಣದ ತನಿಖೆಯ ಜಾಡು ಹಿಡಿದು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ ಎನ್‌ಐಎ ಅಧಿಕಾರಿಗಳು ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದರು.

ಕರ್ನಾಟಕ ಮಾತ್ರವಲ್ಲದೆ ಕೇರಳ ಮತ್ತು ಬಿಹಾರದ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ. ಪಾಟ್ನಾದ ಫುಲ್ವಾರಿಶರೀಫ್ ಪ್ರದೇಶದಲ್ಲಿ ಹಿಂಸಾತ್ಮಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಚಿನ ಹಿನ್ನೆಲೆ ಶಂಕಿತರ ನಿವಾಸಗಳ ಮೇಲೆ ಇನ್ನೂ ದಾಳಿಗಳು ನಡೆಯುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಕುಂಬ್ಳೆ ಬೇಸರ; ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಎಂದ ಕ್ರಿಕೆಟಿಗ

ಈ ಮೊದಲು, ಬಿಹಾರದ ಪಾಟ್ನಾ ಜಿಲ್ಲೆಯ ಫುಲ್ವಾರಿಶರೀಫ್ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷ ಜುಲೈ 12 ರಂದು ಆರಂಭದಲ್ಲಿ ದಾಖಲಾಗಿದ್ದ ಮತ್ತು ಕಳೆದ ವರ್ಷ ಜುಲೈ 22 ರಂದು ಎನ್‌ಐಎಯಿಂದ ಮರು ನೋಂದಾಯಿಸಲ್ಪಟ್ಟ ತ್ವರಿತ ಪ್ರಕರಣದಲ್ಲಿ ಆರು ಜನರನ್ನು ಬಂಧಿಸಲಾಗಿದೆ.

ಈ ವರ್ಷದ ಫೆಬ್ರವರಿ 4 ಮತ್ತು 5 ರಂದು, ಎನ್‌ಐಎ ತಂಡ ಬಿಹಾರದ ಮೋತಿಹಾರಿಯಲ್ಲಿ ಎಂಟು ಸ್ಥಳಗಳಲ್ಲಿ ಶೋಧಿಸಿ ಹತ್ಯೆಯನ್ನು ನಡೆಸಲು ಉದ್ದೇಶಿಸಿದ್ದ ಎನ್ನಲಾದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವ್ಯವಸ್ಥೆ ಮಾಡಿದ ಇಬ್ಬರನ್ನು ಬಂಧಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...