ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ: ಶಾಸಕರಿಂದ ನಾನಾ ಸಲಹೆ

Date:

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಡಿಸೆಂಬರ್ 14ರಂದು ಸಹ ಚರ್ಚೆ ಮುಂದುವರೆಯಿತು.

ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು ಭಾಗಿಯಾಗಿ ಹಲವಾರು ಸಲಹೆಗಳನ್ನು ನೀಡಿದರು.

ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು ಮಾತನಾಡಿ, ಇಂದು ಅಂತರ್ಜಲ ದುರ್ಬಳಕೆ ಅಧಿಕವಾಗುತ್ತಿದೆ. ನೀರು ಮಾರಾಟದ ವಸ್ತು ಆಗುತ್ತಿದೆ. ನೀರಿಗಾಗಿ ಊರಿಂದ ಊರಿಗೆ ಅಲೆಯುವುದು ದುಸ್ಥಿತಿ ಎದುರಾಗಿದೆ. ಆದ್ದರಿಂದ ರಾಜ್ಯದಲ್ಲಿ ಅಂತರ್ಜಲ ಕಾಪಾಡಲು ಕೇಂದ್ರ ಸರ್ಕಾರದ ಮಾದರಿಯಲ್ಲಿ ಅಂತರ್ಜಲ ಬಳಕೆ ನಿಯಂತ್ರಣ ಕಾಯ್ದೆ ಜಾರಿ ತರುವ ಮೂಲಕ ಭವಿಷ್ಯದಲ್ಲಿ ಎದುರಾಗುವ ಸಮಸ್ಯೆ ಪರಿಹಾರಕ್ಕೆ ಮುಂದಾಗುವಂತೆ ಸಲಹೆ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದಲ್ಲಿ ಪ್ರಸ್ತುತ ಭೀಕರ ಬರವಿದ್ದು, ಬೇಸಿಗೆಯಲ್ಲಿ ಭೀಕರ ನೀರಿನ ಸಮಸ್ಯೆ ಎದುರಾಗಲಿದೆ. ಆದ್ದರಿಂದ ಈಗಿನಿಂದಲೇ ರಾಜ್ಯದಲ್ಲಿರುವ ಜಲಾಶಯಗಳಲ್ಲಿನ ನೀರನ್ನು ಕುಡಿಯಲು ಮಾತ್ರ ಬಳಸಲು ಮೀಸಲಿಡಬೇಕು. ಜತೆಗೆ ಅಂತರ್ಜಲ ಅಭಿವೃದ್ಧಿಗಾಗಿ ಮಹಾರಾಷ್ಟ್ರದಲ್ಲಿ ಜಾರಿಯಲ್ಲಿರುವ ಸಿರಪುರ್ ಮಾದರಿ ಯೋಜನೆ ಜಾರಿ ತರುವಂತೆ ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ: 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಉತ್ತರ ಕರ್ನಾಟಕವು ರಾಜ್ಯದ ರಾಜಧಾನಿಯಿಂದ ದೂರ ಇರುವುದರಿಂದ ಶಾಸಕರು ಸೇರಿದಂತೆ ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ತೆರಳಲು ಸಾಧ್ಯವಾಗದೇ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಸಚಿವಾಲಯ ಮತ್ತು ನಿರ್ದೇಶನಾಲಯಗಳಲ್ಲಿ ನಮ್ಮ ಅಧಿಕಾರಿಗಳು, ಸಿಬ್ಬಂದಿ ಇಲ್ಲದ ಕಾರಣ ನಮಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಈಗಾಗಿ ಈ ಎರಡು ಕಚೇರಿಗಳಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಭಾಗದ ಸಿಬ್ಬಂದಿ-ಅಧಿಕಾರಿಗಳನ್ನು ಮೀಸಲು ಸೌಲಭ್ಯದ ಮೇಲೆ ನೇಮಕಾತಿ ಮಾಡಬೇಕು ಎಂದು ಸಲಹೆ ನೀಡಿದರು.

ಕೃಷ್ಣ ಮೇಲ್ದಂಡೆ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕಿದೆ. ಗೋದಾವರಿ, ಅಮರ್ಜ, ಬೆಣ್ಣೆತೊರಾ, ಭೀಮಾ ನೀರಾವರಿ ಯೋಜನೆಗಳಿಂದ ರೈತರಿಗೆ ಸೂಕ್ತವಾಗಿ ನೀರು ದೊರೆಯುವಂತಾಗಬೇಕಿದೆ. ಈ ಬಗ್ಗೆ ಸರ್ಕಾರವು ಚರ್ಚೆಗೆ ತೆಗೆದುಕೊಳ್ಳಬೇಕು. ದೊಡ್ಡ ದೊಡ್ಡ ಯೋಜನೆಗಳ ಬದಲು ಸಣ್ಣ ಯೋಜನೆಗಳನ್ನು ಕೈಗೆತ್ತಿಕೊಂಡರೇ ಅಧಿಕ ಪ್ರಯೋಜನ ಎಂದು ಹೇಳಿದರು. ಕಾವೇರಿ ಕೊಳ್ಳದ ನೀರಿನ ಬಗ್ಗೆ ನಡೆಸುವಂತೆ ಕೃಷ್ಣಾ ಕೊಳ್ಳದ ನೀರಾವರಿ ಯೋಜನೆ ಕುರಿತು ಸಹ ಚರ್ಚೆ ನಡೆಸಬೇಕು ಎಂದು ತಿಳಿಸಿದರು.

ಬೀದರ್‌ನಿಂದ ಬೆಂಗಳೂರಿಗೆ ಸುಗಮವಾಗಿ ಸಂಚರಿಸಲು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಬೇಕು. ರಾಜ್ಯದ ಇತರೆ ಭಾಗಗಳಲ್ಲಿ ಬೇಡಿಕೆಗೆ ತಕ್ಕಂತೆ ನೀಡಿದ ಪ್ರಾಥಮಿಕ ಆರೋಗ್ಯ ಕೇಂದ್ರ-ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ನಮ್ಮ ಭಾಗಕ್ಕೂ ನೀಡಬೇಕು. ಕಲಬುರಗಿಯ ತೊಗರಿ ಮಂಡಳಿಯನ್ನು ಸಶಕ್ತಗೊಳಿಸಬೇಕು ಎಂದು ಸಲಹೆ ಮಾಡಿದರು.

ಕಲಬುರಗಿಯ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ನೀರಾವರಿಯಿಂದ ವಂಚಿತವಾದ ಕಲಬುರಗಿ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು. ರಾಜ್ಯ ಸರ್ಕಾರವು ಮಹಾರಾಷ್ಟ್ರದ ಸರ್ಕಾರದ ಜತೆಗೆ ಮಾತನಾಡಿ ಭೀಮಾ ನದಿಯ ನೀರು ನಮಗೆ ದಕ್ಕುವಂತೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಬೆಣ್ಣೆತೊರಾ ನದಿಯಿಂದ ಕೆರೆಗಳ ತುಂಬಿಸಲು 140 ಕೋಟಿ ರೂ.ವೆಚ್ಚದ ಯೋಜನೆ ಜಾರಿಗೊಳಿಸಬೇಕು.

ಮೈಸೂರು ಭಾಗದಲ್ಲಿ ಮಾಡಿದಂತೆ ನಮ್ಮ ಭಾಗದಲ್ಲಿ ಸಹ ಶಿಕ್ಷಕರ ನೇಮಕ ಮಾಡಬೇಕು. ವಿದ್ಯುತ್, ಕಬ್ಬು ಬೆಳಗಾರರು, ತೊಗರಿ ಬೆಳಗಾರರ ಸಮಸ್ಯೆ ಬಗೆಹರಿಸಬೇಕು ಹಾಗೂ ತೊಗರಿ ಮಂಡಳಿ ಸಬಲಗೊಳಿಸಿ ಹೊಸ ತಳಿ ಸಂಶೋಧನೆ ಮಾಡಬೇಕೆಂದು ಸರ್ಕಾರಕ್ಕೆ ಸಲಹೆ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಪಮಾನ ಹೆಚ್ಚಳ | ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ ಪಡೆದ ರಾಜ್ಯದ ವಕೀಲರು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಈ ಸಮಯದಲ್ಲಿ ಕಪ್ಪು ಬಣ್ಣದ...

ಕನ್ನಡ ಸೇವೆ ಮಾಡಿದ ಅಪರೂಪದ ನಟ ದ್ವಾರಕೀಶ್: ಸಿಎಂ ಸಿದ್ದರಾಮಯ್ಯ ಬಣ್ಣನೆ

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು | ಗಾಳಿ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ: ಈ ಮಾರ್ಗದಲ್ಲಿ ಸಂಚಾರ ಬಂದ್

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ...

ಕಾವೇರಿ ಹೋರಾಟದಲ್ಲಿ ಬಿಜೆಪಿ ಸಂಸದರು ನನಗೆ ಬೆಂಬಲ ನೀಡಿಲ್ಲ: ಬಿಜೆಪಿ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ದೇವೇಗೌಡ

ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇತ್ತ ಬಿಜೆಪಿ ಮತ್ತೆ...