- ಸಿಂಧನಕೇರಾ ಗ್ರಾಮದಲ್ಲಿ ಜರುಗಿದ ಪೌಷ್ಟಿಕ ಆಹಾರ ಆಚರಣೆ, ಪೋಷಣಾ ಅಭಿಯಾನ ಕಾರ್ಯಕ್ರಮ
- ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ತುಂಬಾ ಅಗತ್ಯವಾಗಿದೆ.
ಮಕ್ಕಳ ದೈಹಿಕ ಕ್ಷಮತೆ ಮತ್ತು ಕ್ರಿಯಾಶೀಲತೆಗಳಿಗೆ ಪೌಷ್ಟಿಕತೆ ಆಹಾರ ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರ ನೀಡಬೇಕು. ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ಅಷ್ಟೇ ಅಗತ್ಯವಾಗಿದೆ ಎಂದು ಶಿಕ್ಷಕ ಸಂತೋಷ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಇಲಾಖೆ ಹುಮ್ನಾಬಾದ್ ಇವರುಗಳ ಸಂಯುಕ್ತಾಶ್ರಯದಲ್ಲಿ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮದಲ್ಲಿ ಆಯೋಜಿಸಿದ್ದ ಪೌಷ್ಟಿಕ ಆಹಾರ ಆಚರಣೆ ಪ್ರಧಾನ ಮಂತ್ರಿ ಮಾತ್ರ ವಂದನಾ ಯೋಜನೆ ಸಪಾಹ ಆಚರಣೆ ಹಾಗೂ ರಾಷ್ಟ್ರೀಯ ಪೋಷಣಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪೋಷಣಾ ಅಭಿಯಾನದ ಮೇಲ್ವಿಚಾರಕಿ ದೇವತಾ ಮಾತನಾಡಿ, “ತಾಯಂದಿಯರಲ್ಲಿ ರಕ್ತ ಹೀನತೆ ಹೆಚ್ಚು ಕಂಡು ಬರುತ್ತಿದೆ, ಕಾಳು, ಹಸಿ ತರಕಾರಿ, ಹಣ್ಣು, ಹಂಪಲ ಸೇವನೆಯಿಂದ ರಕ್ತಹೀನತೆ ದೂರಮಾಡಬಹುದು. ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳನ್ನು ತಪಾಸಣೆಗೆ ಮಾಡಿಸಬೇಕು” ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಸೋರುತ್ತಿದೆ ಸರ್ಕಾರಿ ಶಾಲಾ ಮಾಳಿಗೆ; ಆತಂಕದಲ್ಲಿ ಮಕ್ಕಳು
ಇದೇ ಸಂದರ್ಭದಲ್ಲಿ ಗರ್ಭಿಣಿ ತಾಯಿಂದಿಯರಿಗೆ ಸೀಮಂತ ಕಾರ್ಯಕ್ರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ತಿಪ್ಪಮ್ಮ, ಆರೋಗ್ಯ ಇಲಾಖೆಯ ಮನೋರಂಜನೆ, ದತ್ತಾತ್ರೇಯ, ಹಾಗೂ ಅಂಗನವಾಡಿ ಕಾರ್ಯಕರ್ತರಾದ ಸಂಪಾವತಿ, ಪಾರ್ವತಿ, ನಾಗೇಶ್ವರಿ, ಜ್ಯೋತಿ, ಜಗದೇವಿ ಸೇರಿದಂತೆ ತಾಯಂದಿಯರು, ಮಕ್ಕಳು ಉಪಸ್ಥಿತರಿದ್ದರು.
ವರದಿ ಮಾಹಿತಿ: ಸಿಟಿಜನ್ ಜರ್ನಲಿಸ್ಟ್, ಭೀಮರೆಡ್ಡಿ ಸಿಂಧನಕೇರಾ