ಸದ್ದಿಲ್ಲದೇ ಹೆಚ್ಚಳವಾಗುತ್ತಿರುವ ಈರುಳ್ಳಿ ದರ

Date:

ಟೊಮ್ಯಾಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಬೆಲೆ ಕುಸಿತ ಕಂಡ ನಂತರ ನಿಟ್ಟುಸಿರು ಬಿಟ್ಟು ಟೊಮ್ಯಾಟೋ ಕೊಳ್ಳಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಈರುಳ್ಳಿ ದರ ಸದ್ದಿಲ್ಲದಂತೆ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ ಕೆಜಿ ಈರುಳ್ಳಿ ಬೆಲೆ ಸುಮಾರು ₹12-15 ರಷ್ಟು ಏರಿಕೆ ಕಂಡಿದೆ.

ಕಳೆದ ನಾಲ್ಕು ತಿಂಗಳಿನಿಂದ ಟೊಮ್ಯಾಟೋ ದರ ₹200 ಗಡಿ ದಾಟಿತ್ತು. ಇದರಿಂದ ಜನರು ಟೊಮ್ಯಾಟೋ ಕೊಳ್ಳುವುದನ್ನು ಕಡಿಮೆ ಮಾಡಿದ್ದರು. ಅಂದರೆ ಕೆಜಿ ಟೊಮ್ಯಾಟೋ ತೆಗೆದುಕೊಳ್ಳುತ್ತಿದ್ದ ಗ್ರಾಹಕ ಅರ್ಧ ಕೆಜಿ ಟೊಮ್ಯಾಟೋ ಖರೀದಿ ಮಾಡುತ್ತಿದ್ದರು. ಇನ್ನೂ ಕೆಲವರು ಟೊಮ್ಯಾಟೋ ದರ ಹೆಚ್ಚಳದಿಂದ ಟೊಮ್ಯಾಟೋ ಬಳಸದೇ ಹುಣಸೆಹಣ್ಣು ಹಾಕಿ ಅಡುಗೆ ಮಾಡುತ್ತಿದ್ದರು. ಕಳೆದ ಒಂದು ವಾರದಿಂದ ಟೊಮ್ಯಾಟೋ ದರದಲ್ಲಿ ಭಾರೀ ಇಳಿಕೆಯಾಗುತ್ತಿದ್ದು, ಕಳೆದ ವಾರ ಕೆಜಿ ಟೊಮ್ಯಾಟೋಗೆ ₹80 ರಿಂದ ₹90 ಇತ್ತು. ಇದೀಗ ₹50 ರಿಂದ ₹60 ಆಗಿದೆ. ಟೊಮ್ಯಾಟೋ ದರ ಇಳಿಕೆ ಕಂಡಿದೆ ಎಂದು ಗ್ರಾಹಕ ಸಂತಸ ಪಡುವಷ್ಟರಲ್ಲಿಯೇ ಈರುಳ್ಳಿ ದರ ಏರಿಕೆಯಾಗುತ್ತಿರುವುದರಿಂದ ಮತ್ತೆ ಕಂಗಾಲಾಗಿದ್ದಾರೆ.  

ಸದ್ದಿಲ್ಲದೇ ಹೆಚ್ಚಳವಾಗುತ್ತಿರುವ ಈರುಳ್ಳಿ ದರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸದ್ದಿಲ್ಲದಂತೆ ಈರುಳ್ಳಿ ದರ ಹೆಚ್ಚಳವಾಗುತ್ತಿದೆ. ಕಳೆದ ವಾರ ₹25 ಇದ್ದ ಈರುಳ್ಳಿ ದರ ಇದೀಗ ₹30 – ₹40 ತಲುಪಿದೆ. ಸೂಪರ್‌ ಮಾರುಕಟ್ಟೆಗಳಲ್ಲಿ ಕೆಜಿ ಈರುಳ್ಳಿಗೆ ₹45 ನಂತೆ ಮಾರಾಟ ಮಾಡಲಾಗುತ್ತಿದೆ.

ಜೂನ್ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಮುಂಗಾರು ಕೈಕೊಟ್ಟ ಕಾರಣ ರಾಜ್ಯದ ಹಲವೆಡೆ ಉತ್ತಮ ಬೆಳೆ ಬಂದಿಲ್ಲ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಈ ವರ್ಷ ರಾಜ್ಯದಲ್ಲಿ 4000 ಹೆಕ್ಟೇರ್ ಬೆಳೆ ಕೊರತೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ₹50 – ₹60 ಏರಿಕೆಯಾಗುವ ಸಾಧ್ಯತೆ ಇದೆ.

ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಈರುಳ್ಳಿಯ ಹೊಸ ಬೆಳೆ ಒಂದು ತಿಂಗಳು ವಿಳಂಬವಾಗಿದೆ. ಅಹ್ಮದ್‌ ನಗರದಲ್ಲಿಯೂ ಪೂರೈಕೆ ಕಡಿಮೆ ಇದೆ. ಹೀಗಾಗಿ, ಈರುಳ್ಳಿ ಬೆಲೆ ಏರಿಕೆಯಾಗಿದೆ.

ಕಳೆದ ಎರಡು ತಿಂಗಳಿನಿಂದ ಬೆಳ್ಳುಳ್ಳಿ ಬೆಲೆ ಹೆಚ್ಚಳವಾಗಿದ್ದು, ಪ್ರಸ್ತುತ ಕೆಜಿಗೆ ₹200 ಇದೆ. ಹೊಸ ಬೆಳೆ ಬರುವವರಿಗೆ ಈ ದರ ಮುಂದುವರೆಯುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭೂಮಿ, ವಸತಿ ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳು

ಮಹಾರಾಷ್ಟ್ರದಲ್ಲಿ ಕ್ವಿಂಟಾಲ್ಈರುಳ್ಳಿ ದರ ಶೇ. 48ರಷ್ಟು ಏರಿಕೆ

ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ರಾಜ್ಯ ಮಹಾರಾಷ್ಟ್ರ. ಇಲ್ಲಿ ಕಳೆದ ಒಂದು ವಾರದಲ್ಲಿ ಕ್ವಿಂಟಾಲ್‌ ಈರುಳ್ಳಿ ದರ ಶೇ. 48ರಷ್ಟು ಏರಿಕೆ ಕಂಡಿದೆ. ಆಗಸ್ಟ್ 4 ರಂದು ಕ್ವಿಂಟಲ್‌ಗೆ ₹1,550 ಇದ್ದ ಈರುಳ್ಳಿ ದರ ಶುಕ್ರವಾರ ₹2,300ಗೆ ತಲುಪಿದೆ. ಮಹಾರಾಷ್ಟ್ರದ ಲಾಸಲ್‌ಗಾಂವ್ ಎಪಿಎಂಸಿಯಲ್ಲಿ ಈರುಳ್ಳಿಯ ಸಗಟು ಬೆಲೆ ಹೆಚ್ಚಳವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...

ಬೆಂ.ಗ್ರಾಮಾಂತರ | ಕಾರ್ಮಿಕರ ಸುಲಿಗೆ ಮಾಡುತ್ತಿದ್ದ ಮೂವರ ಬಂಧನ

ರಾತ್ರಿ ವೇಳೆ ಕಾರ್ಮಿಕರನ್ನು ಬೆದರಿಸಿ ಹಣ ಮತ್ತು ಮೊಬೈಲ್‌ ಫೋನ್‌ ಸುಲಿಗೆ...

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...