‘ಡ್ಯೂಟಿ ಮುಗಿಯಿತು’ ಎಂದು ರೈಲು ನಿಲ್ಲಿಸಿ ಹೊರಟುಹೋದ ಚಾಲಕ: ಕಕ್ಕಾಬಿಕ್ಕಿಯಾದ ಪ್ರಯಾಣಿಕರು!

Date:

  • ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಬುರ್ವಾಲ್ ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಘಟನೆ
  • ಸುಮಾರು ಮೂರೂವರೆ ಗಂಟೆ ಹಸಿವು, ಬಾಯಾರಿಕೆಯಿಂದ ಕಂಗೆಟ್ಟ ಪ್ರಯಾಣಿಕರು

‘ಡ್ಯೂಟಿ ಮುಗಿಯಿತು’ ಎಂದು ಹೇಳಿ ಚಾಲಕ (ಲೋಕೊ ಪೈಲಟ್) ರೈಲನ್ನು ಮಧ್ಯದಲ್ಲಿ ನಿಲ್ಲಿಸಿ ಹೊರಟು ಹೋದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬುರ್ವಾಲ್ ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇದರಿಂದಾಗಿ ಎರಡು ಎಕ್ಸ್‌ಪ್ರೆಸ್ ರೈಲುಗಳ ಸುಮಾರು 2,500ಕ್ಕೂ ಹೆಚ್ಚು ಪ್ರಯಾಣಿಕರು ಮೂರುವರೆ ಗಂಟೆಗಳ ಕಾಲ ಅನ್ನ, ನೀರಿಲ್ಲದೇ ರೈಲು ನಿಲ್ದಾಣದಲ್ಲೇ ಉಳಿದು ಹೈರಾಣಾಗಿದ್ದಾರೆ.

ರೈಲಿನೊಳಗೆ ನೀರು, ಆಹಾರ ಹಾಗೂ ವಿದ್ಯುತ್ ಸರಬರಾಜು ಕೂಡ ಇಲ್ಲದೆ, ಯಾತನೆಗೊಳಗಾಗಿದ್ದ ಪ್ರಯಾಣಿಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಲ್ಲದೇ, ಇನ್ನೊಂದು ಎಕ್ಸ್‌ಪ್ರೆಸ್ ರೈಲು ಹೋಗದಂತೆ ತಡೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎರಡೂ ರೈಲುಗಳು ರೈಲು ನಿಲ್ದಾಣದಲ್ಲೇ ನಿಂತ ಪರಿಣಾಮ ಸುಮಾರು 2,500 ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ವಿಷಯ ತಿಳಿದ ನಂತರ ರೈಲ್ವೇ ಇಲಾಖೆಯು ಬೇರೆ ಲೋಕೊಪೈಲಟ್ ಮತ್ತು ಸಿಬ್ಬಂದಿಯನ್ನು ಕಳುಹಿಸಿ ರೈಲನ್ನು ನಿಗದಿತ ಸ್ಥಾನಕ್ಕೆ ತಲುಪಿಸಿದೆ. ಚಾಲಕನ ವರ್ತನೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ದೃಢೀಕರಿಸಿ ಮಾಹಿತಿ ನೀಡಿರುವ ಈಶಾನ್ಯ ರೈಲ್ವೆಯ ಅಧಿಕಾರಿಗಳು, “ರೈಲು ಸಂಖ್ಯೆ 15203 ಬರೌನಿ-ಲಕ್ನೋ ಎಕ್ಸ್‌ಪ್ರೆಸ್ ಬುರ್ವಾಲ್ ಜಂಕ್ಷನ್‌ ರೈಲು ನಿಲ್ದಾಣವನ್ನು ತಲುಪಿದ ನಂತರ ಲೋಕೋ ಪೈಲಟ್ ಡ್ಯೂಟಿ ಮುಂದುವರಿಯಲು ನಿರಾಕರಿಸಿದರು. ಆ ಬಳಿಕ ಬೇರೊಬ್ಬ ಲೊಕೋ ಪೈಲಟ್ ಅನ್ನು ಸ್ಥಳಕ್ಕೆ ಕರೆಸಿ ನಿಗದಿತ ಸ್ಥಳಕ್ಕೆ ಪ್ರಯಾಣಿಕರನ್ನು ಕರೆದೊಯ್ಯುವಂತೆ ವ್ಯವಸ್ಥೆ ಮಾಡಲಾಯಿತು. ಈ ಘಟನೆಯಿಂದ ರೈಲು ಲಕ್ನೋಗೆ ತಡವಾಗಿ ತಲುಪಿತು” ಎಂದು ತಿಳಿಸಿದ್ದಾರೆ.


ಈ ನಡುವೆ ಲೋಕೋ ಪೈಲಟ್ ಕೆಲಸ ಮುಂದುವರಿಸಲು ನಿರಾಕರಿಸಿದ್ದಾರೆ ಎಂದು ಪ್ರಯಾಣಿಕರಿಗೆ ಸ್ಟೇಷನ್ ಮಾಸ್ಟರ್ ತಿಳಿಸುವ ವಿಡಿಯೋ ವೈರಲಾಗಿದೆ. ರೈಲು ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನಿಲ್ದಾಣಕ್ಕೆ ತಲುಪಿತ್ತು ಎಂದು ಕೂಡ ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಮ್ಮ ಪ್ರಯಾಣವು ಗರಿಷ್ಠ 25 ಗಂಟೆ 20 ನಿಮಿಷಗಳಲ್ಲಿ ಕೊನೆಗೊಳ್ಳಬೇಕಿತ್ತು. ಆದರೆ ಈ ವಿಶೇಷ ರೈಲಿನಲ್ಲಿ ನಮಗೆ ಇದು ಮೂರನೇ ದಿನ. ಇದು ನಮ್ಮಂತಹ ಬಡ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ನೀಡಿದ ಚಿತ್ರಹಿಂಸೆಯಾಗಿದೆ. ಲೋಕೋ ಪೈಲಟ್‌ಗಳು ನಿದ್ರೆ ಇಲ್ಲದ ಕಾರಣಕ್ಕೆ ಡ್ಯೂಟಿ ಮುಗಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಉತ್ತರಿಸಿದ್ದಾರೆ. ಆದರೆ ನಮ್ಮ ಅವಸ್ಥೆಯನ್ನು ಅಧಿಕಾರಿಗಳು ಯೋಚಿಸಿದ್ದಾರ? ಅನ್ನ ನೀರಿಲ್ಲದೆ ಮೂರೂವರೆ ಗಂಟೆ ರೈಲಲ್ಲೇ ಕೊಳೆಯುವಂತೆ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ?” ಎಂದು ಪ್ರಯಾಣಿಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...