ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಅಕ್ರಮ ವ್ಯವಹಾರದ ಬಗ್ಗೆ ತನಿಖೆ ಆರಂಭಿಸಿದ ED: ವರದಿ

Date:

ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ಎರಡು ವಾರಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಪ್ರಕರಣ ಕೈಗೆತ್ತಿಕೊಂಡಿರುವುದಾಗಿ ವರದಿಯಾಗಿದೆ.

ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಮೂಲಕ ಆಗಿರುವ ಅವ್ಯವಹಾರ ಆಗಿರುವ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಬಿಸಿ-ಟಿವಿ18 ವರದಿ ಮಾಡಿದೆ.

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದ ಎರಡು ವಾರದ ಬಳಿಕ ಈ ಬೆಳವಣಿಗೆ ನಡೆದಿದೆ. ಆದರೆ ಈ ಬಗ್ಗೆ ಇ ಡಿ ಅಧಿಕಾರಿಗಳಾಗಲೀ, ಪೇಟಿಎಂ ಆಗಲಿ ಹೇಳಿಕೆ ನೀಡಿಲ್ಲ ಎಂದು ವರದಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು
ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ಆದೇಶ ಹೊರಡಿಸಿತ್ತು. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶದಲ್ಲಿ ತಿಳಿಸಿತ್ತು.

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಆರ್‌ಬಿಐ, “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರಿದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಹಾಗೂ ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಆರ್‌ಬಿಐ ಸ್ಪಷ್ಟಪಡಿಸಿತ್ತು.

2022 ಮಾರ್ಚ್‌ 11ರಲ್ಲೇ  ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಈ ಆದೇಶದ ಬೆನ್ನಲ್ಲೇ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ನಿರ್ದೇಶಕ ಮಂಜು ಅಗರ್ವಾಲ್ ರಾಜೀನಾಮೆ ನೀಡಿದ್ದರು.

ಇ.ಡಿ ಮೌನ ಪ್ರಶ್ನಿಸಿದ್ದ ಕಾಂಗ್ರೆಸ್

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ್ದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ವಿಪಕ್ಷ ಕಾಂಗ್ರೆಸ್ ಪ್ರಶ್ನಿಸಿತ್ತು.

ಇದನ್ನು ಓದಿದ್ದೀರಾ? ಪೇಟಿಎಂ ಪಾವತಿ ಬ್ಯಾಂಕ್ | ಅಕ್ರಮ ಹಣ ವ್ಯವಹಾರದ ಬಗ್ಗೆ ಇ.ಡಿ ತನಿಖೆಯ ಅಗತ್ಯವೇಕಿದೆ?

ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ಈ ಹಗರಣದ ಬಗ್ಗೆ ಕೇಂದ್ರದ ನಿಲುವು ಏನು? ಕಳೆದ ಏಳು ವರ್ಷಗಳಿಂದ ತಪ್ಪು ನಡೆಯುತ್ತಿದ್ದರೂ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಮೇಲೆ ಏಕೆ ಕ್ರಮ ಜರುಗಿಸಿಲ್ಲ? ಪೇಟಿಎಂ ಪೇಮೆಂಟ್‌ ಬ್ಯಾಂಕಿನ ಮುಖ್ಯಸ್ಥ ಪ್ರಧಾನಿ ಮೋದಿ ಭಕ್ತ. ಅವರೊಂದಿಗೆ ಸೆಲ್ಫಿ ಪಡೆದಿದ್ದಾರೆ. ಪ್ರಧಾನಿಯಿಂದ ಅನುಕೂಲ ಪಡೆಯಲು ಜಾಹೀರಾತುಗಳನ್ನು ಪ್ರಕಟಿಸಿದ್ದಾರೆ” ಎಂದು ಆರೋಪಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...