ಬೀದರ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಂದ್ ಇರುವುದಿಲ್ಲ, ಎಂದಿನಂತೆ ನಿಯಮಿತವಾಗಿ ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
“ಜಿಲ್ಲೆಯಲ್ಲಿ ಮೂರು ದಿನ ಪೆಟ್ರೋಲ್ ಸಿಗಲ್ಲ ಎನ್ನುವ ವಂದತಿ ಹಬ್ಬಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮತ್ತು ಸಾರ್ವಜನಿಕರು ಇಂತಹ ಉಪಾಪೋಹಗಳಿಗೆ, ನಕಲಿ ಮಾಹಿತಿಗಳಿಗೆ ಕಿವಿಗೊಡಬಾರದು” ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಮೂಲಕ ನಿವೇದಿಸಿದ್ದಾರೆ.
ನಾಳೆಯಿಂದ ಜಿಲ್ಲೆಯಲ್ಲಿ ತೈಲ ಸಿಗುವುದಿಲ್ಲ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಜಿಲ್ಲಾದ್ಯಂತ ತೈಲ ಬಂಕ್ನಲ್ಲಿ ಜನರು ಬೈಕ್, ಕಾರು, ಟ್ರ್ಯಾಕ್ಟ್ರ್ ಸೇರಿದಂತೆ ಇನ್ನಿತರ ವಾಹನಗಳಿಗೆ ತೈಲ ತುಂಬಿಸಲು ಮುಗಿಬಿದ್ದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಗ್ಯಾಸ್ ಸಿಲಿಂಡರ್ ಇ-ಕೆವೈಸಿಗೆ ಕೊನೆ ದಿನಾಂಕ ಇಲ್ಲ; ಇದು ಸುಳ್ಳು ಸುದ್ದಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಅಡುಗೆ ಅನಿಲ ಸಂಪರ್ಕ (ಎಲ್ಪಿಜಿ ಕನೆಕ್ಷನ್) ಹೊಂದಿದವರು ಡಿಸೆಂಬರ್ 31 ರೊಳಗೆ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಮತ್ತು ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ, ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕು ಮತ್ತು ಇ-ಕೆವೈಸಿ ಮಾಡಿಸಿದರೆ 500 ರೂ.ಗೆ ಸಿಲಿಂಡರ್ ನೀಡುತ್ತಾರೆ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಜನ ಗ್ಯಾಸ್ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸಾಲಾಗಿ ನಿಂತಿದ್ದರು. ಇದು ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಸುಳ್ಳು ಸುದ್ದಿ ಮಂಗಳವಾರ ಸಂಜೆ ವೈರಲ್ ಆದ ಪರಿಣಾಮ ಸಾರ್ವಜನಿಕರು ಗಾಬರಿಗೊಂಡು ಪೆಟ್ರೋಲ್ ಬಂಕ್ ಗಳಿಗೆ ದೌಡಾಯಿಸಿದ ಘಟನೆ ನಡೆಯಿತು.