ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

Date:

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತನ್ನ ಎಲ್ಲ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯನ್, ಎಚ್.ಡಿ. ದೇವೇಗೌಡ ಅವರ ಹೇಳಿಕೆಯು ನಿರಾಧಾರ’ಮತ್ತು ‘ಅಸಂಬದ್ಧ’ ಎಂದು ಹೇಳಿದ್ದಾರೆ.

ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ಜೆಡಿಎಸ್‌ನ ಎಲ್ಲ ರಾಜ್ಯ ಘಟಕಗಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಒಪ್ಪಿಗೆ ನೀಡಿವೆ ಎಂದು ಮಾಜಿ ಪ್ರಧಾನಿ ಗುರುವಾರ(ಅಕ್ಟೋಬರ್ 19) ಹೇಳಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೇರಳದ ಜೆಡಿಎಸ್ ಘಟಕವು ಯಾವಾಗಲೂ ಎಡ ರಂಗದ ಜತೆ ಗುರುತಿಸಿಕೊಂಡಿದೆ. ಇದೇ ರೀತಿಯ ಬೆಳವಣಿಗೆ 2006ರಲ್ಲಿ ನಡೆದಾಗಲೂ ಇಲ್ಲಿನ ಜೆಡಿಎಸ್ ನಾಯಕರು ನಿಲುವು ಬದಲಿಸಿರಲಿಲ್ಲ. ಈ ಬಾರಿಯೂ ಕೇರಳದ ಜೆಡಿಎಸ್ ನಾಯಕರು ಬಿಜೆಪಿ ಮೈತ್ರಿಯನ್ನು ವಿರೋಧಿಸಿದ್ದಾರೆ ಮತ್ತು ಎಡರಂಗದ ಜತೆ ನಿಂತಿದ್ದಾರೆ. ಆದರೆ, ಸಿಪಿಐ(ಎಂ) ಆ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾವತ್ತೂ ಅಭಿಪ್ರಾಯ ವ್ಯಕ್ತಪಡಿಸಲು ಪ್ರಯತ್ನಿಸಿಲ್ಲ.ಮುಖ್ಯಮಂತ್ರಿಯಾಗಿ ನಾನಂತೂ ಅವರ ಪಕ್ಷದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಿಲ್ಲ.ಇದು ನಮ್ಮ ಕಾರ್ಯವೈಖರಿಗೆ ಸಂಪೂರ್ಣ ವಿರುದ್ಧವಾಗಿದೆ. ಅವರ ಅಚಾತುರ್ಯಕ್ಕೆ ನಾವು ಜವಾಬ್ದಾರರಲ್ಲ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಹಂತಕರು ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು

“ಜೆಡಿಎಸ್ ಕೇರಳ ಘಟಕವು ಬಿಜೆಪಿಯನ್ನು ವಿರೋಧಿಸುತ್ತದೆ ಮತ್ತು ಹೀಗಾಗಿ ನಾವು ಈ ಬಗ್ಗೆ ದೇವೇಗೌಡರ ಹೇಳಿಕೆಯನ್ನು ವಿರೋಧಿಸುತ್ತೇವೆ ಎಂದು ಇಲ್ಲಿನ ನಾಯಕರು ಸ್ಪಷ್ಟಪಡಿಸಿದ್ದಾರೆ. ಕೇರಳ ಜೆಡಿಎಸ್ ರಾಜ್ಯಾಧ್ಯಕ್ಷ ಮ್ಯಾಥ್ಯೂ ಟಿ ಥಾಮಸ್ ಮತ್ತು ಕೇರಳ ಸರ್ಕಾರದಲ್ಲಿ ಜೆಡಿಎಸ್‌ ಸಚಿವ ಕೆ ಕೃಷ್ಣನ್‌ಕುಟ್ಟಿ ದೇವೇಗೌಡರು ನೀಡಿರುವ ಹೇಳಿಕೆ ಸುಳ್ಳು ಎಂದು ಖಡಾಖಂಡಿತವಾಗಿ ಹೇಳಿದ್ದಾರೆ” ಎಂದು ವಿಜಯನ್ ತಿಳಿಸಿದ್ದಾರೆ.

‘ದೇವೇಗೌಡರು ತಮ್ಮ ಬದಲಾಗುತ್ತಿರುವ ರಾಜಕೀಯ ನಿಲುವುಗಳನ್ನು ಸಮರ್ಥಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ’ಎಂದು ಕಟು ಶಬ್ದಗಳಲ್ಲಿ ಟೀಕಿಸಿರುವ ವಿಜಯನ್ ಅವರು, ದೇವೇಗೌಡರು ಈ ಹಿಂದೆಯೂ ತಮ್ಮ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಪಕ್ಷದ ಸಿದ್ಧಾಂತಕ್ಕೆ ದ್ರೋಹವೆಸಗಿದ್ದರು’ ಎಂದು ಆರೋಪಿಸಿದ್ದಾರೆ.

ಎಡ ರಂಗದ ಜತೆ ಉಳಿಯಲು ಕೇರಳದ ಜೆಡಿಎಸ್ ಘಟಕ ನಿರ್ಧಸಿದೆಯಾದರೂ, ಮುಂದಿನ ದಿನಗಳಲ್ಲಿ ಹೊಸ ಪಕ್ಷ ರಚನೆ ಮಾಡಬೇಕೆ ಅಥವಾ ಇತರ ಸ್ಥಳೀಯ ಪಕ್ಷಗಳ ಜತೆ ವಿಲೀನವಾಗಬೇಕೊ ಎಂಬುದರ ಕುರಿತು ನಾಯಕರಲ್ಲಿ ಒಮ್ಮತಮೂಡಿಲ್ಲ. ಈ ಕುರಿತು ಮುಂದಿನ ಯೋಜನೆಗಳನ್ನು ನಿರ್ಧರಿಸಲು ಪಕ್ಷದ ನಾಲ್ವರು ಹಿರಿಯ ನಾಯಕರ ಸಮಿತಿಯನ್ನು ರಚಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...