ಉಡುಪಿ | ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ದೂರು ದಾಖಲಿಸಿದ ಪ್ರಮೋದ್‌ ಮುತಾಲಿಕ್‌

Date:

  • ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್: ಸುನಿಲ್ ಕುಮಾರ್
  • ಟೈಗರ್ ಗ್ಯಾಂಗ್ ಹೆಸರಿನಲ್ಲಿ ಎಷ್ಟು ಹಿಂದೂಗಳ‌ ಹತ್ಯೆ ಮಾಡಿಸಿದ್ದೀರಿ

ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದೂರು ದಾಖಲಿಸಿದ್ದಾರೆ.

ಕಾರ್ಕಳ ನಗರದ ಠಾಣೆಗೆ ಬೆಂಬಲಿಗರೊಂದಿಗೆ ತೆರಳಿದ ಪ್ರಮೋದ್ ಮುತಾಲಿಕ್, ಶಾಸಕರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಬಿಜೆಪಿ ವಿಜಯೋತ್ಸವ ಸಭೆಯಲ್ಲಿ ಮುತಾಲಿಕ್ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದರು. “ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್” ಎಂದು ನೇರ ಆರೋಪ ಮಾಡಿದ್ದರು.

ಈ ಹಿನ್ನೆಲೆ ಪ್ರಮೋದ್ ಮುತಾಲಿಕ್ ಸೋಮವಾರ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಮತ್ತು ಪ್ರಮೋದ್ ಮುತಾಲಿಕ್ ಮುಖಾಮುಖಿಯಾಗಿದ್ದರು. ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕೇವಲ ಸುಮಾರು 4 ಸಾವಿರ ಮತಗಳನ್ನು ಪಡೆದುಕೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುನಿಲ್ ಕುಮಾರ ಏನು ಹೇಳಿದ್ದರು?

“ನೈಜ ಹಿಂದುತ್ವದ ಹೆಸರಲ್ಲಿ ಡೀಲ್ ಮಾಸ್ಟರ್ ಬಂದ್ರು, ಮೊದಲ ಬಾರಿಗೆ ಪ್ರಮೋದ್ ಮುತಾಲಿಕ್ ಹೆಸರು ಬಳಸುತ್ತಿದ್ದೇನೆ. ಯಾಕೆ ಇಲ್ಲಿಗೆ ಬಂದ್ರಿ ನೀವು? ಮುಂದಿನ ಲೋಕಸಭೆಗೆ ಎಲ್ಲಿಗೆ ಡೀಲ್ ಮಾಡಲು ಹೊರಟಿದ್ದೀರಾ? ಉತ್ತರ ಕರ್ನಾಟಕದಲ್ಲಿ ಟೈಗರ್ ಗ್ಯಾಂಗ್ ಹೆಸರಿನಲ್ಲಿ ಎಷ್ಟು ಹಿಂದೂಗಳ‌ ಹತ್ಯೆ ಮಾಡಿಸಿದ್ದೀರಿ” ಎಂದು ಸುನಿಲ್ ಕುಮಾರ್ ಪ್ರಶ್ನೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಯು ಟಿ ಖಾದರ್‌ ವಿಧಾನಸಭಾ ನೂತನ ಸ್ವೀಕರ್‌; ಮಂಗಳವಾರ ನಾಮಪತ್ರ ಸಲ್ಲಿಕೆ

“ನಾನು ಹತ್ತು ಬಾರಿ ಹೇಳುತ್ತಿದ್ದೇನೆ ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್​ ಎಂದು ಹತ್ತು ಬಾರಿ ಹೇಳಲು ಸಿದ್ಧ. ಹಣ ಸಿಗುತ್ತೆ ಅಂದ್ರೆ ಏನು ಬೇಕಾದರೂ ಮಾಡಬಲ್ಲರು. ಅಭಿವೃದ್ಧಿಯನ್ನು ಅಪಹಾಸ್ಯ, ಅವಮಾನ ಮಾಡಿದ್ರು. ಪರಶುರಾಮ ಕ್ಷೇತ್ರದ ಅಣೆಕಟ್ಟು ಜಾಗದಲ್ಲಿ ನೀರಿಲ್ಲ ಎಂದು ಮುತಾಲಿಕ್ ಹಾಗೂ ಬೆಂಬಲಿಗರು ಕ್ರಿಕೆಟ್ ಆಡಿದ್ರು, ಅಣೆಕಟ್ಟು ಮೇಲಿಂದ ಹಾರಿ ಎತ್ತರವೂ ಗೊತ್ತಾಗತ್ತೆ” ಎಂದು ವ್ಯಂತ್ಯವಾಡಿದ್ದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...