ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ, ಅವರೆ ಮುನ್ನಡೆಯುತ್ತಾರೆ: ರಾಷ್ಟ್ರಪತಿ ದ್ರೌಪದಿ ಮುರ್ಮು

Date:

  • ಕರ್ನಾಟಕ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿ ಸಂವಾದ
  • ಬುಡಕಟ್ಟುಗಳ ಕಲ್ಯಾಣಕ್ಕಾಗಿ ಆಂದೋಲನ ಮಾದರಿಯಲ್ಲಿ ಕಾರ್ಯೋನ್ನುಖರಾಗಿ

ನೈಜ ದುರ್ಬಲ ಬುಡಕಟ್ಟು ಜನರ ಸರ್ವಾಂಗೀಣ ವಿಕಾಸಕ್ಕಾಗಿ ವಸತಿ, ಶಿಕ್ಷಣ, ಆರ್ಥಿಕ ಚಟುವಟಿಕೆಗಳು, ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಿ, ಸುಧಾರಣೆಯ ದಾರಿ ತೋರಿಸಿದರೆ ಸಾಕು ಅವರು ಮುನ್ನಡೆಯಬಲ್ಲರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೈಜ ದುರ್ಬಲ ಬುಡಕಟ್ಟುಗಳ ಕಲ್ಯಾಣಕ್ಕಾಗಿ ಆಂದೋಲನದ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಷ್ಟಪತಿ ದ್ರೌಪದಿ ಮುರ್ಮು ಹೇಳಿದರು.

ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ಸಂಜೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಾಜ್ಯದ ನಾನಾ ಜಿಲ್ಲೆಗಳ ನೈಜ ಬುಡಕಟ್ಟು ಸಮುದಾಯಗಳ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ 2011 ರ ಜನಗಣತಿಯ ಪ್ರಕಾರ ಸುಮಾರು 43 ಲಕ್ಷ ಪರಿಶಿಷ್ಟ ವರ್ಗದ ಜನಸಂಖ್ಯೆಯಿದೆ. ಇದರಲ್ಲಿ ನೈಜ ದುರ್ಬಲ ಬುಡಕಟ್ಟುಗಳೆಂದು ಗುರುತಿಸಲಾಗಿರುವ ಜೇನುಕುರುಬರು ಹಾಗೂ ಕೊರಗ ಸಮುದಾಯಗಳ ಜನಸಂಖ್ಯೆ ಸುಮಾರು 50 ಸಾವಿರದಷ್ಟಿದೆ. ರಾಜ್ಯದ ನೈಜ ದುರ್ಬಲ ಬುಡಕಟ್ಟು ಸಮುದಾಯಗಳಲ್ಲಿಯೂ ಡಾಕ್ಟರೇಟ್ ಪದವಿ ಪಡೆದ ಮಹಿಳೆ, ಶುಶ್ರೂಷಕಿ, ಅಂಗನವಾಡಿ ಕಾರ್ಯಕರ್ತೆ, ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಖಾಸಗಿ ಮಹಿಳಾ ನೌಕರರು ಇರುವುದು ಕಂಡು ಬಹಳ ಸಂತಸವಾಗಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರತದಲ್ಲಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಜನಸಂಖ್ಯೆ ಸುಮಾರು 28 ಲಕ್ಷದಷ್ಟಿದೆ. 75 ವಿವಿಧ ಬುಡಕಟ್ಟುಗಳನ್ನು ನೈಜ ದುರ್ಬಲ ಬುಡಕಟ್ಟುಗಳೆಂದು ಪಟ್ಟಿ ಮಾಡಲಾಗಿದೆ. ಹಿಂದುಳಿದ ಅರಣ್ಯವಾಸಿ ಸಮುದಾಯಗಳನ್ನು ಗುರುತಿಸಿ ವಸತಿ, ಕೃಷಿಭೂಮಿ ಕಲ್ಪಿಸಿ ಮುಖ್ಯವಾಹಿನಿಗೆ ತರುವುದು ಸ್ಥಳೀಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಶಾಲೆ, ರಸ್ತೆ, ಆರೋಗ್ಯದ ಸಮಸ್ಯೆಗಳು ಕರ್ನಾಟಕದಲ್ಲಿ ಮಾತ್ರವಲ್ಲ, ದೇಶದೆಲ್ಲೆಡೆ ಸಾಮಾನ್ಯವಾಗಿವೆ. ಅರಣ್ಯವಾಸಿ ಬುಡಕಟ್ಟುಗಳಲ್ಲಿನ ಕ್ಷಯರೋಗ ಮತ್ತು ಇತರೆ ಆರೋಗ್ಯ ಸಮಸ್ಯೆಗಳನ್ನು ಸಂಪೂರ್ಣವಾಗಿ ಹೋಗಲಾಡಿಸಲು ಮಧ್ಯಪ್ರದೇಶ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಪ್ರಸ್ತಾಪಿಸಿದ ರಾಷ್ಟ್ರಪತಿಯವರು ದುರ್ಬಲ ಬುಡಕಟ್ಟುಗಳ ಜನಸಂಖ್ಯೆ ಋಣಾತ್ಮಕವಾಗುತ್ತಿರುವದನ್ನು ತಡೆಯಲು ಇಂತಹ ಯೋಜನೆಗಳನ್ನು ಹಾಕಿಕೊಳ್ಳಬೇಕು ಎಂದು ಹೇಳಿದರು.

ನೈಜ ದುರ್ಬಲ ಬುಡಕಟ್ಟುಗಳ ವಿಕಾಸಕ್ಕಾಗಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಪಿವಿಟಿಜಿ ಅಭಿವೃದ್ಧಿ ಮಿಷನ್ ಅಡಿ 15 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಹಣ ಬಂದಿರುತ್ತದೆ ಮನೆ, ಶಾಲೆ, ರಸ್ತೆ, ವಿದ್ಯುದ್ದೀಪ, ನೀರು ಮೊದಲಾದ ಸೌಕರ್ಯ ಒದಗಿಸಲು ಸರ್ಕಾರಗಳು ಆಂದೋಲನದ ರೀತಿ ಕಾರ್ಯೋನ್ಮುಖವಾಗಬೇಕು ಎಂದು ತಿಳಿಸಿದರು.

ನೈಜ ದುರ್ಬಲ ಬುಡಕಟ್ಟುಗಳು ಶಿಕ್ಷಣಕ್ಕೆ ಒತ್ತು ನೀಡಲಿ, ಎಸ್ ಎಸ್ ಎಲ್ ಸಿ ಓದಿದವರನ್ನು ಗುರುತಿಸಿ ಅವರಲ್ಲಿ ಇರುವ ಕರಕುಶಲ ಕಲೆ, ಜೀವನ ಕೌಶಲ್ಯಗಳನ್ನು ಪ್ರೋತ್ಸಾಹಿಸಿ ಅವರ ಉತ್ಪನ್ನಗಳಿಗೆ ಮೌಲ್ಯವರ್ಧನೆ ಕಲ್ಪಿಸಿದರೆ ಅವರು ಸಮಾಜದ ಮುಖ್ಯವಾಹಿನಿಯೊಂದಿಗೆ ಸಾಗಬಲ್ಲರು. ರಾಜ್ಯದಲ್ಲಿ ಕೇವಲ 50 ಸಾವಿರದಷ್ಟು ನೈಜ ದುರ್ಬಲ ಬುಡಕಟ್ಟು ಸಮುದಾಯವಿರುವದರಿಂದ ಸರ್ಕಾರಕ್ಕೆ ಇದು ಕಷ್ಟದ ಕಾರ್ಯವಲ್ಲ ಎಂದರು.

ರಾಜ್ಯದ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಆಶ್ರಮ ಶಾಲೆಗಳಲ್ಲಿ ನೈಜ ದುರ್ಬಲರಿಗಾಗಿ ವಿಶೇಷ ಸ್ಥಾನ, ಗಮನ ನೀಡಿ ಶಿಕ್ಷಣಕ್ಕೆ ಪ್ರೋತ್ಸಾಹಿಸಬೇಕು. ತಾವು ಚಿಕ್ಕವರಿದ್ದಾಗ ತಮ್ಮ ತಂದೆಗೆ ಇಂತಹ ಯಾವ ಸೌಕರ್ಯಗಳು ಇಲ್ಲದಿದ್ದರೂ ತಮಗೆ ಶಿಕ್ಷಣ ಕೊಡಿಸಿದ್ದನ್ನು ರಾಷ್ಟ್ರಪತಿ ಸ್ಮರಿಸಿದರು.

ಬುಡಕಟ್ಟು ಜನರ ಬಳಿ ಆಪ್ತವಾಗಿ ಬೆರೆತ ರಾಷ್ಟ್ರಪತಿ

ಸಂವಾದದ ಪ್ರಾರಂಭದಲ್ಲಿ ಸಭಾಂಗಣದಲ್ಲಿ ನೆರೆದಿದ್ದ ನೈಜ ದುರ್ಬಲ ಬುಡಕಟ್ಟು ಜನರ ಜೀವನ ಮಟ್ಟ ಅರಿಯಲು ಪ್ರಯತ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬುಡಕಟ್ಟು ಜನ ಮುಕ್ತವಾಗಿ ಮಾತನಾಡಲು ಹಿಂಜರಿದಾಗ ರಾಷ್ಟ್ರಪತಿಗಳು ಖುದ್ದು ತಾವೇ ಜನರ ಆಸನಗಳ ಬಳಿ ತೆರಳಿ ಒಬ್ಬೊಬರನ್ನು ಪ್ರತ್ಯೇಕವಾಗಿ ಆಪ್ತವಾಗಿ ಮಾತನಾಡಿಸಿ, ಅವರಿಗೆ ಮನೆ ಇದೆಯೇ? ಸರ್ಕಾರ ಮನೆ ಕಟ್ಟಿಸಿಕೊಟ್ಟಿದೆಯೇ? ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆಯೇ, ಅರಣ್ಯ ಭೂಮಿಯಲ್ಲಿ ವಾಸವಾಗಿರುವವರು ಯಾರಿದ್ದೀರಿ ಎಂಬ ಪ್ರಶ್ನೆಗಳನ್ನು ಕೇಳಿ ಕೊರಗ ಮತ್ತು ಜೇನುಕುರುಬ ಬುಡಕಟ್ಟು ಜನರಿಂದ ನೇರ ಉತ್ತರ ಪಡೆದರು.

ಸ್ಥಳೀಯ ಭಾಷೆಯಲ್ಲಿಯೇ ಮಾತನಾಡಲು ಪ್ರೋತ್ಸಾಹ

ಜೇನುಕುರುಬ ಸಮುದಾಯದ ಪರವಾಗಿ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡವನಾಡು ಹಾಡಿಯ ಚಂದ್ರು, ಹಿಂದಿಯಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಿದ್ದ ವೇಳೆಯಲ್ಲಿ ಮಧ್ಯೆ ಪ್ರವೇಶಿಸಿದ ರಾಷ್ಟ್ರಪತಿ ಅವರು, ಸ್ಥಳೀಯವಾಗಿ ನಿಮ್ಮ ಭಾಷೆಯಲ್ಲಿಯೇ ಮಾತನಾಡಿ ಎಂದು ಸೂಚಿಸಿದರು.

ಕೊರಗ ಸಮುದಾಯದ ಮೊಟ್ಟಮೊದಲ ಡಾಕ್ಟರೇಟ್ ಪದವೀಧರೆ, ಪ್ರಾಧ್ಯಾಪಕಿ ಉಡುಪಿ ಜಿಲ್ಲೆ ಸಾಲಿಗ್ರಾಮದ ಡಾ. ಸವಿತಾ ಮಾತನಾಡಿ, ಕೊರಗ ಸಮುದಾಯ ಅಪೌಷ್ಟಿಕತೆ, ಆರೋಗ್ಯ ಸಮಸ್ಯೆಗಳಿಂದ ಜನಸಂಖ್ಯೆ ಕ್ಷೀಣಿಸುತ್ತಿದೆ. ಈ ಸಂಶೋಧನೆ ಮತ್ತು ಪರಿಹಾರ ಕಾರ್ಯಗಳು ನಡೆಯಬೇಕು ಎಂದರು.

ಬುಡಕಟ್ಟು ಸಮುದಾಯಗಳ ಚಂದ್ರು, ರತ್ನಾ, ಸುಂದರ, ಬಾಬು ಮತ್ತು ಅಯ್ಯಪ್ಪ ಅವರು ರಾಷ್ಟ್ರಪತಿ ಹಾಗೂ ರಾಜ್ಯಪಾಲರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಿದರು.

ಈ ಸುದ್ದಿ ಓದಿದ್ದೀರಾ? ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐ ಆರೋಪ ಪಟ್ಟಿಯಲ್ಲಿ ಬಿಹಾರದ ಡಿಸಿಎಂ ತೇಜಸ್ವಿ ಯಾದವ್ ಹೆಸರು

ರಾಷ್ಟ್ರಪತಿ ಭವನದಿಂದ ಬುಡಕಟ್ಟು ಜನರಿಗೆ ಉಡುಗೊರೆ

ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೊರಗ ಹಾಗೂ ಜೇನುಕುರುಬ ಬುಡಕಟ್ಟುಗಳ ಜನರಿಗೆ ರಾಷ್ಟ್ರಪತಿ ಭವನದಿಂದ ತಂದಿದ್ದ ಉಡುಗೊರೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವಿತರಿಸಿದರು.

ಮೈಸೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಆಗಮಿಸಿದ್ದ ಜೇನುಕುರುಬ ಹಾಗೂ ಕೊರಗ ಬುಡಕಟ್ಟು ಸಮುದಾಯಗಳ 50 ಜನ ಭಾಗವಹಿಸಿ ತಮ್ಮ ಸಾಂಸ್ಕೃತಿಕ, ಸಾಮಾಜಿಕ ಅಸ್ಮಿತೆಯ ವಿಶಿಷ್ಟತೆಗಳನ್ನು ಸಾರಿದರು.

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ‌ ಮಣಿವಣ್ಣನ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಪಿ ಎಸ್ ಕಾಂತರಾಜು ಮತ್ತಿತರ ಗಣ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ...

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಮುಂಬೈ | ಸಾಂಗ್ಲಿಯಿಂದ ಶಿವಸೇನೆ ಸ್ಪರ್ಧೆ; ಬಿಜೆಪಿಗೆ ನೆರವು ನೀಡದಂತೆ ಸಂಜಯ್ ರಾವತ್ ಕರೆ

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು...