ಸಿ ಟಿ ರವಿ ನೀಡಿರುವ ಅಂಡಮಾನ್ ಜೈಲು ಭೇಟಿ ಆಫರ್ ಸ್ವೀಕರಿಸಿದ ಸಚಿವ ಪ್ರಿಯಾಂಕ್ ಖರ್ಗೆ

Date:

  • ಬರಗಾಲ ಮುಗಿಸಿ ಜುಲೈನಲ್ಲಿ ಭೇಟಿ ಮಾಡುವೆ, ಅಲ್ಲಿಯವರಗೆ ಈ ಆಫರ್ ಇರುತ್ತಾ?
  • ಅಂಡಮಾನ್ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ: ಸಿ ಟಿ ರವಿ

ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ‌ ಸಂಬಂಧಿಸಿದಂತೆ ಮಾಜಿ ಶಾಸಕ ಸಿ ಟಿ ರವಿ ಅವರು ನೀಡಿರುವ ಅಂಡಮಾನ್ ಜೈಲು ಭೇಟಿ ಆಫರ್ ಅನ್ನು ಸಚಿವ ಪ್ರಿಯಾಂಕ್ ಖರ್ಗೆ ಸ್ವೀಕರಿಸಿದ್ದಾರೆ.

“ಸಿ ಟಿ ರವಿ‌ ಅವರು ಫಂಡ್ ಮಾಡೋದರಿಂದ ನಾನು ಹೋಗಿ ಸಾವರ್ಕರ್ ಇದ್ದ ಜೈಲಿಗೆ ಹೋಗಿ ನೋಡಿಕೊಂಡು ಬರ್ತೀನಿ. ಆದರೆ ಇವಾಗ ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಬರ ಮುಗಿದ ಮೇಲೆ ಜುಲೈ ತಿಂಗಳಲ್ಲಿ ಭೇಟಿ ಮಾಡುತ್ತೇನೆ. ಆದರೆ ಅಲ್ಲಿಯವರಗೆ ಈ ಆಫರ್ ಇರುತ್ತಾ ಎಂದು ಪ್ರಶ್ನಿಸಿದ್ದಾರೆ.

“ನನ್ನ ಸಿದ್ದಾಂತ ನನಗೆ ಕ್ಲಿಯರ್ ಇದೆ. ಬಸವ ತತ್ವ, ಅಂಬೇಡ್ಕರ್ ತತ್ವದ ಸಿದ್ದಾಂತ ನನ್ನದು. ಬಿಜೆಪಿಗೆ ನಾನು 3-4 ಪ್ರಶ್ನೆ ಕೇಳಿದ್ದೇನೆ. ಸಾವರ್ಕರ್ ಬ್ರಿಟಿಷರ ಪಿಂಚಣಿಗೆ ಅರ್ಜಿ ಹಾಕಿರಲಿಲ್ಲವಾ? ವೀರ ಅಂತ ಬಿರುದು ಸಾವರ್ಕರ್ ಗೆ ಯಾರು ಕೊಟ್ಟಿದ್ದು? ದೇಶ ವಿಭಜನೆ ಮಾಡೋಕೆ ಮೊದಲು ಪ್ರಸ್ತಾಪ ಮಾಡಿದ್ದು ಯಾರು ಅಂತ ಬಿಜೆಪಿ ಅವರು ಹೇಳಲಿ” ಎಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಧಾನಸಭೆಯಲ್ಲಿ ಹಾಕಲಾಗಿರುವ ಸಾವರ್ಕರ್ ಫೋಟೋವನ್ನು ತೆಗೆಯಲು ನನಗೆ ಅವಕಾಶ ಸಿಕ್ಕರೆ ಈಗಲೇ ತೆರವು ಮಾಡುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಸಚಿವರ ಈ ಹೇಳಿಕೆಗೆ ವಿವಾದಕ್ಕೆ ಕಾರಣವಾಗಿತ್ತು. ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಸಿ ಟಿ ರವಿ ಟ್ವೀಟ್‌ ಮಾಡಿದ್ದರು.

ಸಿ ಟಿ ರವಿ ಟ್ವೀಟ್‌

ಆತ್ಮೀಯರಾದ ಪ್ರಿಯಾಂಕ್‌ ಖರ್ಗೆ ಅವರೇ, ತಾಯಿ ಭಾರತಿಯ ಮಡಿಲಿನಲ್ಲಿ ಜನಿಸಿದ ಮಹಾನ್ ರಾಷ್ಟ್ರೀಯವಾದಿ, ಕರಿನೀರ ವೀರ, ಹುತಾತ್ಮ ವೀರ್ ಸಾವರ್ಕರ್ ಅವರು, ಬ್ರಿಟಿಷರಿಂದ ಕಠಿಣ ಕಾರಾಗ್ರಹ ಶಿಕ್ಷೆಗೊಳಪಡಿಸುವ ತೀರ್ಪಿನಂತೆ, ಘೋರ ಕರಿನೀರಿನ ಶಿಕ್ಷೆ ಅನುಭವಿಸಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರುವ ಸೆಲ್ಯುಲರ್ ಜೈಲಿಗೆ ಭೇಟಿ ನೀಡಲು ನಿಮ್ಮನ್ನು ಆಹ್ವಾನಿಸುತ್ತೇನೆ. ಅಂದ ಹಾಗೆ ನಿಮ್ಮ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ

ಅತ್ತ ನಿಮ್ಮ ನೆಚ್ಚಿನ ನೆಹರು, ಶಿಕ್ಷೆಯ ನೆಪದಲ್ಲಿ, ಬ್ರಿಟಿಷರ ಜೈಲುಗಳಲ್ಲಿ ಐಷಾರಾಮಿ ಉಪಚಾರ ಪಡೆಯುತ್ತಿರುವಾಗ, ಇತ್ತ ಅಂಡಮಾನಿನ ಜೈಲಿನಲ್ಲಿ ವೀರ್ ಸಾವರ್ಕರ್ ಯಾವ ರೀತಿಯ ನೋವು ಮತ್ತು ಸಂಕಟವನ್ನು ಅನುಭವಿಸಿದರು ಎಂಬ ಸಣ್ಣ ಅನುಭೂತಿ ನಿಮಗಾಗಬಹುದು.

ಸೆಲ್ಲ್ಯುಲರ್ ಜೈಲಿನ ಆವರಣದಲ್ಲೇ “ಸಾವರ್ಕರ್ ಮತ್ತು ನೆಹರು ಇವರಿಬ್ಬರಲ್ಲಿ ನಿಜವಾದ ಸ್ವಾತಂತ್ರ್ಯ ಹೋರಾಟಗಾರ ಯಾರು?” ಎಂಬುದರ ಕುರಿತು ಬಹಿರಂಗ ಚರ್ಚೆ ನಡೆಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ವಿನಾಯಕ ದಾಮೋದರ್ ಸಾವರ್ಕರ್ ಅವರ ಫೋಟೋವನ್ನು ವಿಧಾನಸಭೆ ಅಥವಾ ಪರಿಷತ್ತಿನಿಂದ ತೆಗೆಯುವ ದುಸ್ಸಾಹಸ ಮಾಡಿದರೆ ಇಡೀ ರಾಜ್ಯದ ಜನತೆಯಾದಿಯಾಗಿ ನಾವೆಲ್ಲರೂ ಉಗ್ರ ಪ್ರತಿಭಟನೆ ನಡೆಸುತ್ತೇವೆ.

ಇಂದು ನೀವು ಅಧಿಕಾರದಲ್ಲಿರಬಹುದು, ನೆನಪಿಡಿ, ಮುಂದೆ ನಾವು ಅಧಿಕಾರಕ್ಕೆ ಬಂದಾಗ ನೆಹರೂ ಅವರ ಭಾವಚಿತ್ರ ವಿಧಾನಸೌಧದಲ್ಲಿ ಹೇಗೆ ಇರುತ್ತದೆ ನೋಡೋಣ. ನೆನಪಿಡಿ, ಪರಿವಾರವಾದದ ಬಲದಿಂದ ಬೆಳೆದಂತಹ ಹೊಗಳುಭಟರು ಬೇಕು ಎಂದಾಗ ಭಾವಚಿತ್ರ ಇಡಲಿಕ್ಕೆ, ಬೇಡ ಅಂದಾಗ ತೆಗೆಯಲಿಕ್ಕೆ, ವೀರ ಸಾವರ್ಕರ್ ಅವರು ನಿಮ್ಮ ಹಾಗೆ ಅಥವಾ ನೆಹರು ಅವರ ಹಾಗೆ ವಂಶವಾದದಿಂದ ಬೆಳೆದವರಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ, ಎನ್‌ಸಿಬಿಸಿ ಅಧ್ಯಕ್ಷರಿಂದ ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಕೆಲಸ: ದ್ವಾರಕಾನಾಥ್

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...