ರಾಯಚೂರು | ಎಪಿಎಂಸಿ ಆಸ್ತಿಯನ್ನು ‘ಲೀಸ್ ಕಂ ಸೇಲ್’ ಮೇಲೆ ಮಾರಾಟ; ಕೋಟ್ಯಂತರ ರೂ. ಅಕ್ರಮ ಆರೋಪ

Date:

ರಾಯಚೂರು ನಗರದ ಎಪಿಎಂಸಿಯಲ್ಲಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಒಟ್ಟಾಗಿ ಎಪಿಎಂಸಿ ಆಸ್ತಿಯನ್ನು ಲೀಸ್ ಕಂ ಸೇಲ್ ಮೇಲೆ ಮಾರಾಟ ಮಾಡಿದ್ದಾರೆ. ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ವಿರೂಪಾಕ್ಷಿ ಒತ್ತಾಯಿಸಿದ್ದಾರೆ.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರು ಎಪಿಎಂಸಿಗೆ ಮಾರಾಟಕ್ಕೆ ಬರುವ ಬೆಳೆ ಟೆಂಡರ್ ಆಗದೇ ಹೋದಲ್ಲಿ ಸಂಗ್ರಹಿಸಲು ನಾಲ್ಕು ಗೋದಾಮುಗಳನ್ನು ನಿರ್ಮಿಸಲಾಗಿತ್ತು. ಐದು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಡಿಮೆ ದರಕ್ಕೆ ಮಾರಾಟ ಮಾಡಿ ಅವ್ಯವಹಾರ ಎಸಗಲಾಗಿದೆ. ಶೈಲೇಶ್ವರ್ ಕಾಟನ್ ಟ್ರೇಡರ್ಸ್‌ ಎಂಬುವವರಿಗೆ  2022ರಲ್ಲಿ 34 ಲಕ್ಷ ರೂ.ಗಳಿಗೆ ಲೀಸ್ ಕಂ ಸೇಲ್ ಮಾಡಲಾಗಿದೆ.

ರೇಣುಕಾ ಟ್ರೇಡರ್ಸ್‌ ಎಂಬುವವರಿಗೆ ಅದೇ ವರ್ಷದಲ್ಲಿ 500ಮೆಟ್ರಿಕ್ ಟನ್ ದಾಸ್ತಾನು ಸಾಮರ್ಥ್ಯದ ಗೋದಾಮನ್ನು 50ಲಕ್ಷ ರೂ.ಗಳಿಗೆ ಮಾರಾಟ ಮಾಡಲಾಗಿದ. ಶ್ರೀನಾಥ ಇಂಡಸ್ಟ್ರೀಸ್ ಹಾಗೂ ಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ ಎಂಬುವವರಿಗೆ ಟೆಂಡರ್ ಹಾಲ್‌ನ್ನು ಸಹ ಮಾರಾಟ ಮಾಡಲಾಗಿದೆ. ಎಪಿಎಂಸಿ ಕಾಯ್ದೆಗಳ ಅನ್ವಯ ಸ್ವತ್ತಿನ ವ್ಯವಹಾರದ ಆಸ್ತಿಯನ್ನು ಮಾರಾಟ ಮಾಡಲು ಕಾಯ್ದೆಯಲ್ಲಿ ಅವಕಾಶವಿಲ್ಲ. ಅಂಗಡಿ ಕಂ. ಗೋದಾಮು ಮಾರಾಟ ಮಾಡಲು ಮಾತ್ರ ಅವಕಾಶವಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ಗೋದಾಮುಗಳನ್ನು ಮಾರಾಟಮಾಡಿ ವಂಚಿಸಲಾಗಿದೆ. ಅಚ್ಯುತರೆಡ್ಡಿ ಅಧ್ಯಕ್ಷರಾಗಿದ್ದಾಗ ಮಾರಾಟ ಮಾಡಲಾಗಿದೆ. ಎಪಿಎಂಸಿ ಕಾರ್ಯದರ್ಶಿಯಾಗಿರುವ ಕೃಷ್ಣ ಅವರೇ ಅಕ್ರಮಕ್ಕೆ ಕಾರಣವಾಗಿದ್ದಾರೆ ಎಂದು ಆರೋಪಿಸಿದರು. ಮಾರಾಟ ಮಾಡುವಾಗ 17ಷರತ್ತುಗಗಳನ್ನು ವಿಧಿಸಿ ಮಾರಾಟ ಮಾಡಲಾಗಿದೆ. ವಾಣಿಜ್ಯ ಉದ್ದೇಶಕ್ಕೆ ಬಳಸಬಾರದು, ವಾಸ ಸೇರಿ ಬೇರೆಯದಕ್ಕೆ ಬಳಸದಂತೆ ಷರತ್ತು ವಿಧಿಸಿರುವನ್ನು ಉಲ್ಲಂಘಿಸಲಾಗಿದೆ. ಕೂಡಲೇ ಎಪಿಎಂಸಿಆಡಳಿತ ಗೋದಾಮುಗಳನ್ನು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿ ಎಪಿಎಂಸಿ ಸಚಿವರಿಗೆ ದೂರು ನೀಡಿರುವುದಾಗಿ ಹೇಳಿದರು.

ಇನ್ನೂ 88ನಿವೇಶನಗಳನ್ನು ಸಹ ಲೀಸ್ ಕಂ ಸೇಲ್ ಮಾಡಲಾಗಿದೆ. ಪತ್ರಿಕೆಗಳಲ್ಲಿ ಅರ್ಜಿ ಕರೆದು ಅರ್ಜಿಗಳನ್ನು ಅಹ್ವಾನಿಸಲಾಗಿತ್ತು. ಬಂದಿರುವ ಅರ್ಜಿದಾರರೊಂದಿಗ ಒಳ ಒಪ್ಪಂದ ಮಾಡಿಕೊಂಡು ಪ್ರತೀ  ಚದುರು ಅಡಿಗೆ 80 ರೂ. ನಿಗಧಿಗೊಳಿಸಿರುವ ದರವನ್ನು 40ರೂ.ಗೆ ಇಳಿಸಿ 21ಕೋಟಿ 31ಲಕ್ಷ ಹಣ ಸಂಗ್ರಹಿಸಲಾಗಿದೆ. ಆದರೆ, ಸರಿ ಸುಮಾರು 21ಕೋಟಿ ರೂ. ಅಕ್ರಮ ನಡೆದಿದೆ. 10ವೇರ್ ಹೌಸ್, 28ಇತರೆ ನಿವೇಶನಗಳಿಗೆ ಕಡಿಮೆ ದರದಲ್ಲಿ ಸರ್ಕಾರಕ್ಕೆ ವಂಚಿಸಲಾಗಿದೆ. ಕೂಡಲೇ ಅಕ್ರಮದ ತನಿಖೆ ನಡೆಸದೇ ಹೋದಲ್ಲಿ ರೈತರೊಂದಿಗೆ ಹೋಗಿ ಗೋದಾಮುಗಳನ್ನು ತೆರವುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ವಕೀಲ ಎನ್. ಶಿವಶಂಕರ, ನರಸಿಂಹ ನಾಯಕ, ನರಸಪ್ಪ ಆಶಾಪುರು, ಹಂಪಯ್ಯ, ನಾಗರಾಜಗೌಡ, ಆಶೋಕರೆಡ್ಡಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...