ರಾಯಚೂರು | ಬಿತ್ತನೆ ಬೀಜ ಗುಣಮಟ್ಟ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Date:

ರಾಯಚೂರು ಮತ್ತು ದೇವದುರ್ಗ ತಾಲೂಕಗಳಲ್ಲಿ ಹತ್ತಿ ಬೆಳೆ ಕುಂಠಿತವಾಗಲು ಕಳಪೆ ಬೀಜ ಕಾರಣವೆಂದು ರೈತರು ಆರೋಪಿಸಿದ್ದಾರೆ. ಬಿತ್ತನೆ ಬೀಜಗಳ ಗುಣಮಟ್ಟದ ಪರೀಕ್ಷೆ ನಡೆಸಿ, ಕಳಪೆ ಬೀಜಗಳನ್ನು ಮಾರಾಟ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ ಸೂಚಿಸಿದರು.

ರಾಯಚೂರಿನಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಮತ್ತು ಕೃಷಿ ಇಲಾಖೆ ಅಧಿಕಾರಗಳ ಜೊತೆ ಶುಕ್ರವಾರ ಅವರು ಸಭೆ ನಡೆಸಿದ್ದು, ಕೃಷಿ ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. “ಹತ್ತಿ ಬೀಜವು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಬೀಜ ಮಾರಾಟಗಾರರು ಕಡ್ಡಾಯವಾಗಿ ಬೀಜ ದರ ಪಟ್ಟಿ ನಮೂದಿಸುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ರೈತ ನಾಯಕ ಚಾಮರಸ ಮಾಲಿ ಪಾಟೀಲ್, “ಹತ್ತಿ ಬೀಜ ಕಳಪೆಯಾಗಿದ್ದರಿಂದ ಬೆಳೆ ಕೆಂಪುರೋಗಕ್ಕೆ ತುತ್ತಾಗಿ ಇಳುವರಿ ಕುಸಿತವಾಗಿದೆ. ಬೆಳೆ ನಷ್ಟವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ” ಎಂದು ರೈತ ಮುಖಂಡ ಚಾಮರಸ ಮಾಲಿಪಾಟೀಲ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೃಷಿ ಜಂಟಿ ನಿರ್ದೆಶಕಿ ದೇವಿಕಾ ಮಾತನಾಡಿ, “ಈಗಾಗಲೇ ಕೃಷಿ ಇಲಾಖೆ ಹಾಗೂ ಕೃಷಿವಿಜ್ಞಾನಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳೆ ಕುಂಠಿತವಾಗಲು ಬೀಜ ಕಾರಣವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೂ, ಇಲಾಖೆಯಿಂದ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳ ನಿಯುಕ್ತಿಗೊಳಿಸಿ ಹತ್ತಿ ಬೀಜ ಮಾರಾಟದ ಮೇಲೆ ನಿಗಾವಹಿಸಲಾಗುತ್ತಿದೆ” ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದುರಗೇಶ, ಪ್ರೊಬೆಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರು, ರೈತ ಸಂಘಗಳ ಮುಖಂಡರಾದ ಪ್ರಭಾಕರ ಪಾಟೀಲ್, ಬೂದೆಯ್ಯಸ್ವಾಮಿ, ಶರಣಪ್ಪ ಮರಳಿ,ಸೂಗುರಯ್ಯ ಸ್ವಾಮಿ ಮಠದ, ದೇವರಾಜ ನಾಯಕ, ಶರಣಪ್ಪ ಮರಳಿ, ರಾಮುಲು ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...