ಲೋಕಸಭೆ ಭದ್ರತಾ ಲೋಪ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.
ಲೋಕಸಭೆಯಲ್ಲಿ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು, ಸ್ಮೋಕ್ ಡಬ್ಬಿಗಳನ್ನು ಸಿಡಿಸಿದ ಘಟನೆಯ ಕುರಿತು ವಿಪಕ್ಷಗಳು ಚರ್ಚೆಗೆ ಆಗ್ರಹಿಸಿವೆ. ಈ ನಡುವೆ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಸದನದ ಬಾವಿಗಳಿದು ಪ್ರತಿಭಟನೆ ಮಾಡಿದ್ದರು. ಇದರಿಂದಾಗಿ ಒಬ್ರಿಯಾನ್ ಅವರನ್ನು ಅಮಾನತು ಮಾಡಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ತಿಳಿಸಿದರು.
Rajya Sabha Chairman suspends TMC MP Derek O’Brien for the rest of the session. @PoulomiMSaha joins us for more on this.#DerekOBrien #RajyaSabha #ParliamentSecurityBreach | @PoojaShali pic.twitter.com/sOGrVYOwI3
— IndiaToday (@IndiaToday) December 14, 2023
ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ‘ಅಶಿಸ್ತಿನ ವರ್ತನೆಗಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ನಿರ್ಣಯ ಮಂಡಿಸಿದರು. ಇದಕ್ಕೆ ವಿಪಕ್ಷಗಳು ಗದ್ದಲ ಸೃಷ್ಟಿಸಿದರೆ, ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದರು.
“ಟಿಎಂಸಿ ಸದಸ್ಯ ಡೆರೆಕ್ ಒಬ್ರಿಯಾನ್ ಅವರು ನಿಯಮಗಳನ್ನು ಗೌರವಿಸುವುದಿಲ್ಲ. ಇದು ಗಂಭೀರ ದುರ್ನಡತೆಯಾಗಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಹಾಗಾಗಿ, ರಾಜ್ಯಸಭೆಯ ನಿಯಮ 256ರ ಅನ್ವಯ ಡೆರೆಕ್ ಒಬ್ರಿಯಾನ್ ಅವರನ್ನು ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದರು.
#DerekOBrien #Parliament pic.twitter.com/5F5spRMWNy
— NDTV (@ndtv) December 14, 2023
ಈ ನಡುವೆ ಡೆರೆಕ್ ಓಬ್ರಿಯಾನ್ ಸಹಿತ ವಿಪಕ್ಷಗಳ ಸದಸ್ಯರು, ‘ಸರ್ವಾಧಿಕಾರಿ ನಡೆ ಸರಿಯಲ್ಲ’ ಎಂದು ಘೋಷಣೆ ಕೂಗ ತೊಡಗಿದರು. ಈ ಹಿನ್ನೆಲೆಯಲ್ಲಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಕಲಾಪವನ್ನು ಮತ್ತೆ 2 ಗಂಟೆಗೆ ಮುಂದೂಡಿದರು.