ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗದ ಅಧಿಕಾರಿಗಳಿಗೆ ನಮ್ಮ ಸರ್ಕಾರದಲ್ಲಿ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲೇ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು.

“ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಕಮಿಟ್ ಮೆಂಟ್ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ. ಅವಕಾಶವೂ ಇಲ್ಲ. ನಿಮ್ಮ ಲೆವೆಲ್ ನಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ” ಎಂದು ಹೇಳಿದರು.

“ಸರ್ಕಾರ ಬಂದು 8 ತಿಂಗಳಾಗಿದೆ. ಡಿಸಿ, ಸಿಇಒ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ.‌ ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕನ್ನಡ ಕಡ್ಡಾಯ | ಸರ್ಕಾರದ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

“ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ? ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಈ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ” ಎನ್ನುವ ಸೂಚನೆ ನೀಡಿದರು.

ಸಾರ್ವಜನಿಕರು ರೆವಿನ್ಯೂ ಇಲಾಖೆ, ತಹಶೀಲ್ದಾರ್ ಮತ್ತು, AC ಹಾಗೂ DC ಕಚೇರಿಗಳಿಗೆ ಅಲೆದಾಟ ಕಡಿಮೆ ಆಗಿದೆಯಾ? ತಹಶೀಲ್ದಾರ್, AC, DC ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ? ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ? ಎಷ್ಟು ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ” ಎಂದರು.

“ಕೋಲಾರದ ಹಾಸ್ಟೆಲ್‌ನ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರುಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...