ʼಪಠಾಣ್‌ʼ ಚಿತ್ರಕ್ಕಾಗಿ ₹200 ಕೋಟಿ ಸಂಭಾವನೆ ಪಡೆದ ಶಾರುಖ್‌ ಖಾನ್‌

Date:

ಗಲ್ಲಾ ಪೆಟ್ಟಿಗೆಯಲ್ಲಿ 1,057 ಕೋಟಿ ರೂಪಾಯಿ ಕಲೆ ಹಾಕಿರುವ ʼಪಠಾಣ್‌ʼ

ಅಂದಾಜು 270 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಚಿತ್ರ

ಬಾಲಿವುಡ್‌ನ ಸ್ಟಾರ್‌ ನಟ ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಇತ್ತೀಚೆಗೆ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ನೆಟ್ಟಿಗರ ಮೆಚ್ಚುಗೆಗೂ ಪಾತ್ರವಾಗಿತ್ತು. ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆಯ ಗಳಿಕೆ ಮಾಡಿರುವ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಲು ಶಾರುಖ್‌ ಖಾನ್‌ ಬರೋಬ್ಬರಿ 200 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ತೆರೆಕಂಡಿದ್ದ ʼಪಠಾಣ್‌ʼ ಸಿನಿಮಾ ಭಾರತದಲ್ಲಿ 657 ಕೋಟಿ ರೂಪಾಯಿಗಳನ್ನು ಗಳಿಸಿದರೆ, ವಿದೇಶಗಳಲ್ಲಿ 392 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿತ್ತು. ಒಟ್ಟಾರೆಯಾಗಿ ಜಗತ್ತಿನಾದ್ಯಂತ ಚಿತ್ರ 1,050 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿತ್ತು.

ʼಪಠಾಣ್‌ʼ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಕಲೆ ಹಾಕಿದೆಯಾದರೂ, ಚಿತ್ರಕ್ಕೆ ಬಂಡವಾಳ ಹೂಡಿದ್ದ ʼಯಶ್‌ ರಾಜ್‌ ಫಿಲಂಸ್‌ʼ ಸಂಸ್ಥೆಗೆ ಕೇವಲ 333 ಕೋಟಿ ರೂಪಾಯಿಗಳಷ್ಟು ಲಾಭವಾಗಿದೆ. ಸಾವಿರ ಕೋಟಿಯಲ್ಲಿ 400 ಕೋಟಿಗೂ ಹೆಚ್ಚು ಮೊತ್ತ ವಿತರಕರ ಪಾಲಾದರೆ, ನಿರ್ಮಾಣ ವೆಚ್ಚ ಅಂದಾಜು 270 ಕೋಟಿ ರೂಪಾಯಿ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

333 ಕೋಟಿ ರೂಪಾಯಿ ಲಾಭಾಂಶದಲ್ಲಿ ಶಾರುಖ್‌ ಖಾನ್‌ ಬರೋಬ್ಬರಿ 200 ಕೋಟಿ ರೂಪಾಯಿ ಮೊತ್ತವನ್ನು ಸಂಭಾವನೆ ರೂಪದಲ್ಲಿ ಪಡೆದಿದ್ದಾರೆ. ಶಾರುಖ್‌, ‘ಪಠಾಣ್‌’ ಚಿತ್ರದಲ್ಲಿ ನಟಿಸಲು ಒಪ್ಪಿದಾಗ ಲಾಭಾಂಶದಲ್ಲಿ ಶೇ.60 ರಷ್ಟು ಪಾಲನ್ನು ತಮಗೆ ನೀಡಬೇಕು ಎಂದು ʼಯಶ್‌ ರಾಜ್‌ ಫಿಲಂಸ್‌ʼ ಜೊತೆಗೆ ಕರಾರು ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಶಾರುಖ್‌ ಅವರ ಪಾಲನ್ನು ಹೊರತುಪಡಿಸಿ 133 ಕೋಟಿ ರೂಪಾಯಿ ನಿವ್ವಳ ಮೊತ್ತ ನಿರ್ಮಾಪಕರ ಕೈ ಸೇರಿದೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...