ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

Date:

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ವರ್ಷ ಬೇಸಿಗೆಗೂ ಮೊದಲೇ ಕುಡಿಯಲು ನೀರಿಲ್ಲ. ಇನ್ನು ಬೇಸಿಗೆ ಕಳೆಯುವುದು ಹೇಗೆ ಎಂಬುದು ಇಲ್ಲಿನ ಗ್ರಾಮದ ಜನರ ಆತಂಕ.

ತಾಲೂಕಿನ ದೊಡ್ನಳ್ಳಿ ಗ್ರಾಮದ ಲಂಡಕನಗಳ್ಳಿ, ಬಚಗಾಂವ್ ಭಾಗದಲ್ಲಿ ಈಗಾಗಲೇ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಅಲ್ಲದೇ ಐದು ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಅಲ್ಲದೆ, ಸಮರ್ಪಕವಾದ ರಸ್ತೆಗಳೂ ಇಲ್ಲ.

ಕುಡಿಯುವ ನೀರಿನ ಸಮಸ್ಯೆ ಇದೆ. ಅಗತ್ಯವಿದ್ದಾಗ ನೀರು ಪೂರೈಸುವಂತೆ ಸ್ಥಳೀಯರು ಪಂಚಾಯಿತಿಗೆ ಕೋರಿದ್ದಾರೆ. ಆದರೆ, ಪಂಚಾಯಿತಿ ಪರ್ಯಾಯ ವ್ಯವಸ್ಥೆ ಬಗ್ಗೆ ಈವರೆಗೆ ಕ್ರಮವಹಿಸಿಲ್ಲ. ಈ ಭಾಗದಲ್ಲಿ ರಸ್ತೆಯ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ ಈವರೆಗೆ ಈಡೇರಿಲ್ಲ ಎಂದು ದೂರುತ್ತಾರೆ ಗ್ರಾಮಸ್ಥರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಚಗಾಂವ ಗ್ರಾಮದ ಕಾಳೆಹೊಂಡ, ಹಿಟ್ನಗದ್ದೆ ಭಾಗದಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಸಂಖ್ಯೆ ಹೆಚ್ಚಿದ್ದು, ಕುಡಿಯುವ ನೀರಿನ ಸಮಸ್ಯೆ ಇದೆ. ಸರಿಯಾದ ರಸ್ತೆಗಳಿಲ್ಲ. ಇತ್ತೀಚೆಗೆ ನಗರ ಸಮೀಪದ ಲಾಲಗೌಡ ನಗರದಲ್ಲಿ ಕೊಳವೆಬಾವಿ ಕೊರೆದು ನೀರು ಪೂರೈಸುತ್ತಿದ್ದರೂ, ಅದು ಕೆಲವು ಮನೆಗಳಿಗೆ ಮಾತ್ರ ಸೀಮಿತವಾಗಿದೆ.

ಈ ಭಾಗದಲ್ಲಿ ಹಂದಿಗೊಲ್ಲರು ವಾಸವಿದ್ದು, ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದಾರೆ. ಅವರ ಜೀವನ ನಿರ್ವಹಣೆಗೆ ಅನುಕೂಲ ಕಲ್ಪಿಸುವ ವ್ಯವಸ್ಥೆ ಆಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...