- ಅವೈಜ್ಞಾನಿಕವಾಗಿ ಕ್ವಾರಿ ನಡೆಸಿದ್ದು ದುರಂತಕ್ಕೆ ಕಾರಣವಾಗಿತ್ತು
- ಕಲ್ಲುಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಗಳನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ.
ಉಪಗುತ್ತಿಗೆ ಪಡೆದು ಕ್ವಾರಿ ನಡೆಸುತ್ತಿದ್ದ ಮಹಮ್ಮದ್ ಹಕೀಂ ಮತ್ತು ಮಹಮ್ಮದ್ ಹಿಲಾಲ್ ಬಂಧಿತ ಆರೋಪಿಗಳು. ಕಳೆದ ಒಂದು ವರ್ಷದಿಂದಲೂ ದುರಂತದ ಪ್ರಮುಖ ಆರೋಪಿ ಹಕೀಂ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದನು. ಆರೋಪಿಯನ್ನು ಬಂಧಿಸಿಲ್ಲವೆಂದು ಪೊಲೀಸರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.
ಆರೋಪಿಯ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು. ಇದೀಗ, ಕೇರಳದ ಗುರುವಾಯೂರಿನಲ್ಲಿದ್ದ ಹಕೀಂ ಹಾಗೂ ಗುಂಡ್ಲುಪೇಟೆ ಪಟ್ಟಣದಲ್ಲಿದ್ದ ಹಿಲಾಲ್ನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ
2022ರ ಮಾರ್ಚ್ 4 ರಂದು ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಗುಮ್ಮಕಲ್ಲು ಗುಡ್ಡದ ಕಲ್ಲುಕ್ವಾರಿ ಕುಸಿದಿತ್ತು. ದುರ್ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಬಬ್ಲು, ಮೀರಜ್ ಹಾಗೂ ಸರ್ಫರಾಜ್ ಎಂಬ ಮೂವರು ಕಾರ್ಮಿಕರು ಕಲ್ಲಿನಡಿ ಸಿಲುಕಿ ಮೃತರಾಗಿದ್ದರು. ಅವೈಜ್ಞಾನಿಕವಾಗಿ ಕ್ವಾರಿ ನಡೆಸಿದ್ದು ದುರಂತಕ್ಕೆ ಕಾರಣವಾಗಿತ್ತು.