ಬೀದರ್‌ | ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಬೇಕು

Date:

  • ಕಮಠಾಣ ಸರ್ಕಾರಿ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್‌ ಶಿಬಿರ
  • ಕಾನೂನು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕಲಿಯಲು ಇದೊಂದು ಸದಾವಕಾಶವಿದ್ದಂತೆ.

ಕಾನೂನು ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪ ಕನಕಟ್ಟೆ ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ಹಾಗೂ ಬೀದರ್‌ನ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆರ್.ವಿ.ಬಿಡಪ್ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಕಮಠಾಣ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ 2022-23ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

“ವಿದ್ಯಾರ್ಥಿ ಜೀವನದಲ್ಲಿ ಕಲಿಯಲು ಇದೊಂದು ಸದಾವಕಾಶವಿದ್ದಂತೆ, ನಮ್ಮ ಭಾಗದಲ್ಲಿ ಮಾರ್ಚದಿಂದ ಮೇವರೆಗೆ ಹೆಚ್ಚು ಬಿಸಿಲು ಇರುತ್ತದೆ. ಹಾಗಾಗಿ ಎಲ್ಲಾ ಎನ್.ಎಸ್.ಎಸ್.ಶಿಬಿರಾರ್ಥಿಗಳು ಕಮಠಾಣದ ಪ್ರತಿ ಮನೆಯ ಮುಂದುಗಡೆ ಒಂದೊಂದು ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ಆಯಾ ಮನೆಯವರೆಗೆ ನೀಡಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ ಅವರು ಮಾತನಾಡಿ, “ವಕೀಲರಾದವರು ಮಾತನಾಡದವರಿಗೆ ಮಾತನಾಡಿಸಬೇಕು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ಉಪನ್ಯಾಸಕರನ್ನು ಕರೆಯಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕಾರ್ಯಕ್ರಮದಲ್ಲಿ ಕೇವಲ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸದೆ ಕಮಠಾಣ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿರುವುದು ಸಂತಸದ ವಿಷಯವಾಗಿದೆ. ಮಕ್ಕಳಲ್ಲಿ ಶಿಸ್ತು ಬಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಕಮಠಾಣ ಗ್ರಾಮ ಪಂಚಾಯತ ಅಧ್ಯಕ್ಷ ರವಿಕುಮಾರ ಶಂಕರ ನಡುವಿನದೊಡ್ಡಿ, ಸಿಪಿಐ ಮಲ್ಲಿಕಾರ್ಜುನ ಯಾತನೂರ, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ, ಸತೀಶ ಪಾಟೀಲ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಿಸಿಸಿ ಬ್ಯಾಂಕ್‌ನಲ್ಲಿ ₹400 ಕೋಟಿ ಸಾಲ ಪಡೆದಿರುವ ಖಂಡ್ರೆ, ಬ್ಯಾಂಕ್ ಮುಳುಗಿಸಲು ಹೊರಟಿದ್ದಾರೆ: ಖೂಬಾ

ಕಾರ್ಯಕ್ರಮದಲ್ಲಿ ಕಮಠಾಣ ಗ್ರಾಮ ಪಂಚಾಯತ ಉಪಾಧ್ಯಕ್ಷ ಯಾಸ್ಮೀನ ಬೇಗಂ, ಬೀದರ ತಾ.ಪಂ. ಸದಸ್ಯ ಮಹ್ಮದ ಗೌಸೋದ್ದಿನ್, ಕಮಠಾಣ ಗ್ರಾ.ಪಂ.ಪಿಡಿಒ ಶಶಿ ಕಪ್ಪೂರ, ಕಾಲೇಜು ಪ್ರಾಂಶುಪಾಲ ಪ್ರತಿಭಾ ಡಿ., ಬೀದರ ಆರ್.ವಿ.ಬಿಡಪ್ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಟಿ. ಮುನಿಯಪ್ಪ, ಸಹಾಯಕ ಪ್ರಾಧ್ಯಾಪಕ ಡಾ.ಗಣಪತಿ ಟಿ., ಜಯಶ್ರೀ ಪಾಟೀಲ, ಡಾ. ಜೈ ಸಂತೋಷಿಮಾ ಸೇರಿದಂತೆ ಕಾನೂನು ಮಹಾವಿದ್ಯಾಲಯ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಮಗೆ ಬೇಕಾಗಿರುವುದು ಸಮಾನತೆ, ಸಮೃದ್ಧ ಭಾರತ : ಅಪ್ಪಗೆರೆ ಸೋಮಶೇಖರ

ದೇಶದ ಎಲ್ಲ ಧರ್ಮಗಳಿಗೆ ರಕ್ಷಾ ಕವಚವಾಗಿರುವ ಸಂವಿಧಾನದ ಕತೃ ‌ಬಾಬಾ ಸಾಹೇಬ್‌...

ಬೀದರ್ | ಕೇಂದ್ರ ಸಚಿವ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ...

ಬೀದರ್‌ | ಎರಡು ಬಾರಿ ಮೋದಿ ಅಲೆಯಲ್ಲಿ ಗೆದ್ದ ಖೂಬಾ ಮತ್ತೆ ಅದೇ ಕನಸು ಕಾಣುತ್ತಿದ್ದಾರೆ : ಸಾಗರ್‌ ಖಂಡ್ರೆ

ಜನರ ಸಮಸ್ಯೆ ಆಲಿಸುವಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿಫಲರಾಗಿದ್ದಾರೆ. ಎರಡು...

ಬೀದರ್‌ |‌ ಸಾಮರಸ್ಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಡಿಪಾಯ : ಜಗದೀಶ್ವರ ಬಿರಾದರ್

ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು...