ತಾಪಮಾನ | ಬೆಂಗಳೂರಿನಲ್ಲಿ ಶೇ.74 ರಷ್ಟು ಜಲಮೂಲಗಳು ನಾಶ

Date:

ಅಕಾಲಿಕ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆ ಅರವರಿಸಿದೆ. ತಂಪಿನ ನಗರಿ ಎಂದು ಖ್ಯಾತಿ ಗಳಿಸಿದ್ದ ಬೆಂಗಳೂರು, ಈಗ ಬಿಸಿಲ ನಾಡಾಗಿ ಬದಲಾಗುತ್ತಿದೆ. ಈ ಬಿಸಿಲ ಝಳಕ್ಕೆ, ತಾಪಮಾನ ಹೆಚ್ಚಳಕ್ಕೆ ನಗರದ ಜನರು ಸುಸ್ತಾಗಿದ್ದಾರೆ. ಬೆಳಿಗ್ಗೆ 9ಗಂಟೆ ಬಳಕ ಮನೆಯಿಂದ ಹೊರಗೆ ಓಡಾಡುವುದೇ ಅಸಾಧ್ಯವೆಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ನಗರವು ಶೇ.66ರಷ್ಟು ತನ್ನ ಹಸಿರು ಹೊದಿಕೆಯನ್ನು ಕಳೆದುಕೊಂಡಿದೆ. ಅಲ್ಲದೇ, ಶೇ.74 ರಷ್ಟು ಜಲಮೂಲಗಳು ಕೂಡ ನಾಶವಾಗಿವೆ.

ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಗಳ ಕೇಂದ್ರ (ಸಿಇಎಸ್‌) ಪ್ರಕಾರ, ನಗರವು ಶೇ.584ರಷ್ಟು ನಿರ್ಮಾಣ ಪ್ರದೇಶಗಳನ್ನು ಕಂಡಿದೆ. ಈ ಬೇಸಿಗೆಯಲ್ಲಿ ನಗರ ಎಲ್-ನಿನೊ ಪರಿಣಾಮಕ್ಕೆ ಸಿಲುಕಿಕೊಂಡಿದೆ ಎನ್ನುತ್ತಾರೆ ತಜ್ಞರು.

ಇದೇ ಪರಿಸ್ಥಿತಿ ಮುಂದುವರಿದರೆ ಬೆಂಗಳೂರಿನ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು. 2038ರ ವೇಳೆಗೆ, ಸಿಇಎಸ್‌ ಅರಣ್ಯಗಳು ಶೇ.0.65ಕ್ಕೆ (2022ರಲ್ಲಿ ನಡೆದಿದ್ದ ಕೊನೆಯ ಗಣತಿ ಪ್ರಕಾರ, ಇದು ಶೇ.3.32 ಇತ್ತು) ಕಡಿಮೆಯಾಗಬಹುದು ಎಂದು ಊಹಿಸಲಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ನಗರದಲ್ಲಿ 2038ರ ವೇಳೆಗೆ ಸುಸಜ್ಜಿತ ಪ್ರದೇಶಗಳು ನಿರ್ಮಾಣವಾಗಬಹುದು. ಆದರೆ, ಪರಿಸ್ಥಿತಿ ಉತ್ತಮವಾಗಿರುವುದಿಲ್ಲ ಎಂದು ಸಿಇಎಸ್ ಅಧ್ಯಯನ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸುಸಜ್ಜಿತ ಕಟ್ಟಡಗಳ ನಿರ್ಮಾಣ ಅಥವಾ ಸುಸಜ್ಜಿತ ಮೇಲ್ಮೈಗಳ ಹೆಚ್ಚಳ ಹಸಿರು ಸ್ಥಳಗಳಲ್ಲಿನ ಕಡಿತಕ್ಕೆ ಕಾರಣವಾಗುತ್ತದೆ. ಇದರಿಂದ ಬೆಂಗಳೂರಿನಲ್ಲಿ ಬಿಸಿಲಿನ ಶಾಖವು ಇನ್ನಷ್ಟು ಹೆಚ್ಚಳವಾಗಬಹುದು. ಈ ವರ್ಷ ಮಾರ್ಚ್‌ನಲ್ಲಿ 33.04 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನ ಈಗ 41.4 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ” ಎಂದು ಸಿಇಎಸ್‌ ಅಧಿಕಾರಿ ಪ್ರೊ. ಟಿ.ವಿ ರಾಮಚಂದ್ರ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಖಾಸಗಿ ಬಸ್ ಕಂಡಕ್ಟರ್​ಗಳ ಗಲಾಟೆ; ಪುರುಷ ನಿರ್ವಾಹಕನಿಗೆ ಚಪ್ಪಲಿ ತೋರಿಸಿದ ಲೇಡಿ ಕಂಡಕ್ಟರ್

“ನಗರದಲ್ಲಿರುವ ಕೆರೆಗಳು, ಹಸಿರು ಹೊದಿಕೆ ಕಡಿಮೆಯಾಗುತ್ತಿರುವುದು ವಾಯುಗುಣದ ಮೇಲೆ ಪರಿಣಾಮ ಬೀರಿದೆ. ಇದು ತಂಪಾದ ವಾತಾವರಣವನ್ನು ಕಡಿಮೆ ಮಾಡುತ್ತದೆ. ಬಿಸಿ ವಾತಾವರಣವನ್ನು ಹೆಚ್ಚಳ ಮಾಡುತ್ತದೆ. ನಗರ ಶಾಖ ಪರಿಣಾಮವು ಸುತ್ತುವರಿದ ತಾಪಮಾನ ಮತ್ತು ಆರ್ದ್ರತೆಯ ಮಟ್ಟವನ್ನು ಹೆಚ್ಚಿಸುತ್ತದೆ. ಪರಿಣಾಮ ಶಾಖದ ಒತ್ತಡ ಮತ್ತು ಶಾಖ-ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತವೆ” ಎಂದು ರಾಮಚಂದ್ರ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...