ಟಿಪ್ಪು ಜಯಂತಿ | ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಸರ್ಕಾರ

Date:

ಶುಕ್ರವಾರ (ನ.10) ಟಿಪ್ಪು ಜಂಯತಿಯಂದು ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ. ಇಂದು ಟಿಪ್ಪು ವರ್ಫ್‌ ಎಸ್ಟೇಟ್‌ ಸಂಘವು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿಯ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಯಾರೂ ಸಭೆ ಸೇರದಂತೆ ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ.

ಶ್ರೀರಂಗಪಟ್ಟಣ ತಹಶಿಲ್ದಾರ್‌ ಪರಶುರಾಮ ಸತ್ತಿಗೇರಿ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಸಿಆರ್‌ಪಿಸಿ ಕಲಂ 144 ಅಡಿಯಲ್ಲಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಪಟ್ಟಣದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ. ಯಾವುದೇ ರೀತಿಯ ಸಭೆ, ಸಮಾರಂಭ ಮತ್ತು ಮೆರವಣಿಗೆ ನಡೆಸುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಬ್ಯಾನರ್‌, ಬಂಟಿಂಗ್ಸ್‌, ಮೈಕ್‌, ಪಟಾಕಿ ಯಾವುದಕ್ಕೂ ಅವಕಾಶವಿಲ್ಲ. ಡಿಜೆ ಹಾಕುವಂತಿಲ್ಲ, ರಸ್ತೆ ರಡೆ ನಡೆಸುವಂತಿಲ್ಲ” ಎಂದು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ನವೆಂಬರ್ 11ರಂದು ಟಿಪ್ಪು ಜಯಂತಿ ಆಚರಣೆಗೆ ಆದೇಶ ಹೊರಡಿಸಿತ್ತು. ಅದರಂತೆ ಟಿಪ್ಪು ಜಯಂತಿ ಕಾರ್ಯಕ್ರಮಗಳನ್ನು ಸರ್ಕಾರ ನಡೆಸುತ್ತಿತ್ತು. ಆದರೆ, ಬಿಜೆಪಿ ಆಡಳಿತದಲ್ಲಿ ಟಿಪ್ಪು ಜಯಂತಿಯಲ್ಲಿ ನಿಲ್ಲಿಸಲಾಗಿತ್ತು. ಇದೀಗ, ಕಾಂಗ್ರೆಸ್‌ ಸರ್ಕಾರವೇ ಮತ್ತೆ ಅಧಿಕಾರದಲ್ಲಿದ್ದರೂ ತಾನೇ ಜಾರಿಗೆ ತಂದಿದ್ದ ಅಚರಣೆಗೆ ತಾನೇ ವಿರುದ್ಧವಾಗಿದೆ ಎಂಬುದನ್ನು ನಿಷೇಧಾಜ್ಞೆ ಸಾಬೀತು ಪಡಿಸಿದೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದೆಲ್ಲದರ ನಡುವೆ, ಟಿಪ್ಪು ಹುಟ್ಟಿದ ದಿನಾಂಕ ನವೆಂಬರ್ ತಿಂಗಳು ಅಲ್ಲ, ಡಿಸೆಂಬರ್ 1 ಎಂದು ಸಂಶೋಧಕರು ಮತ್ತೆ ಮಾಡಿದ್ದಾರೆ. ಹೀಗಾಗಿ, ಟಿಪ್ಪು ಜಯಂತಿಯ ದಿನಾಂಕವೂ ಬದಲಾಗಿದೆ. ಆದರೆ, ಅಂದು ಕೂಡ ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ, ಸರ್ಕಾರ ಈ ವರ್ಷ ಟಿಪ್ಪು ಜಯಂತಿ ಆಚರಿಸುವುದು ಅನುಮಾನವಾಗಿ ಉಳಿದಿದೆ.

ಆದರೆ, ಹಲವರು ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಿಸುತ್ತಾರೆ. ಅಂತೆಯೇ ಟಿಪ್ಪು ವರ್ಫ್‌ ಎಸ್ಟೇಟ್‌ ಶುಕ್ರವಾರ ಟಿಪ್ಪು ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ, ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ. ಇದು ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಟಿಪ್ಪುಗೆ ಮಾಡಿದ ಅವಮಾನ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...