ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹವಲಾರು ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಬರಿದಾಗಿದ್ದ ಜಲಾಶಯಗಳು ಭರ್ತಿಯಾಗುತ್ತಿವೆ. ಧಾರಾಕಾರ ಮಳೆಗೆ ಗುಡ್ಡಗಳೂ ಕುಸಿಯುತ್ತಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂರ್ಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಮಳೆಗಾಲ ಮತ್ತು ಚಳಿಗಾಲದಲ್ಲಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ಮಾಣಿಕ್ಯದಾರ, ಕೆಮ್ಮಣ್ಣುಗುಂಡಿ ಮತ್ತು ಹೆಬ್ಬೆ ಜಲಪಾತ ಪ್ರವಾಸಿಗರ ಕಣ್ಮನ ಸೆಳೆಯುತ್ತವೆ. ದಿನವೀಡಿ ಸುರಿಯುವ ಮಳೆಯ ನಡುವೆ ಈ ಪ್ರದೇಶದಲ್ಲಿ ಸುತ್ತಾಡಲು ಇಚ್ಚಿಸುತ್ತಾರೆ. ಆದರೆ, ಈಗ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಈ ಎಲ್ಲ ಪ್ರದೇಶಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಗುಡ್ಡಕುಸಿಯುತ್ತವೆ. ಬೃಹತ್ ಕಲ್ಲುಗಳು ರಸ್ತೆಗೆ ಉರುಳುತ್ತಿವೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಜುಲೈ 31ರವರೆಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂರ್ಧಿಸಲಾಗಿದೆ. ಚಂದ್ರದ್ರೋಣ ಪರ್ತವ ಪ್ರವೇಶ ಮಾರ್ಗದಲ್ಲಿ ಚೆಕ್ಪೋಸ್ಟ್ ಹಾಕಲಾಗಿದ್ದು, ಪೊಲೀಸರು ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ.