- ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್ ಖಾತ್ರಿ
- ಸಿದ್ದರಾಮಯ್ಯ ಮಾಸ್ ಲೀಡರ್, ಎಲ್ಲೇ ನಿಂತರೂ ಗೆಲ್ಲುತ್ತಾರೆ
ರಾಜ್ಯ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬುಧವಾರ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಜೆ ಜಾರ್ಜ್ ಹೇಳಿದರು.
ಯುಗಾದಿಯ ಶುಭ ಸಂದರ್ಭದಲ್ಲಿ ಪಟ್ಟಿ ಬಿಡುಗಡೆ ಮಾಡಲು ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ ಎಂದು ಜಾರ್ಜ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಜೆ ಜಾರ್ಜ್, ಮೊದಲಪಟ್ಟಿ ಬಿಡುಗಡೆಯಾಗಲಿದ್ದು, ಉಮೇದುವಾರಿಕೆ ವಿಚಾರದಲ್ಲಿ ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್ ಖಾತ್ರಿಯಾಗಿದೆ. ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳನ್ನೇ ಪಕ್ಷ ಕಣಕ್ಕಿಳಿಸಲು ಆಯ್ಕೆ ಮಾಡಿಕೊಂಡಿದೆ ಎಂದು ಹೇಳಿದರು.
ಇದೇ ವೇಳೆ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ತಮ್ಮ ಅಭಿಪ್ರಾಯ ತಿಳಿಸಿದ ಅವರು, ಸಿದ್ದರಾಮಯ್ಯ ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಅವರು ಕೋಲಾರದಲ್ಲಿ ಸ್ಪರ್ಧಿಸುತ್ತೇನೆ ಎಂದಾಗ ನಾನು ಜೊತೆಯಲ್ಲಿದ್ದೆ ಎಂದ ಅವರು, ಮಾಜಿ ಮುಖ್ಯಮಂತ್ರಿಗಳು ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಅವರು ಮಾಸ್ ಲೀಡರ್ ಎಂದರು.