ಉತ್ತರ ಪ್ರದೇಶ | ಅಮೇಥಿಯಲ್ಲಿ ಅಡ್ಡಗೋಡೆಯಿಲ್ಲದೆ ಶೌಚಾಲಯ ನಿರ್ಮಾಣ; ವಿಡಿಯೋ ವೈರಲ್

Date:

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಲೋಕಸಭಾ ಕ್ಷೇತ್ರವಾದ ಅಮೇಥಿಯಲ್ಲಿ ಯಾವುದೇ ಅಡ್ಡ ಗೋಡೆ ನಿರ್ಮಿಸದೆ ಒಂದರ ಪಕ್ಕ ಒಂದರ ಹಾಗೆ ನಾಲ್ಕು ಸಾರ್ವಜನಿಕ ಶೌಚಾಲಯ ನಿರ್ಮಿಸಿರುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯು ಅಮೇಥಿಯ ಜಗದೀಶು‌ ಬ್ಲಾಕ್‌ನ ಕಟೇ ಗ್ರಾಮದಿಂದ ವರದಿಯಾಗಿದ್ದು, ಇಲ್ಲಿನ ಸಾರ್ವಜನಿಕ ಶೌಚಾಲಯವನ್ನು ಭಾರೀ ಮೊತ್ತ ವ್ಯಯಿಸಿ ನಿರ್ಮಿಸಲಾಗಿದೆ. ಈ ಸಾರ್ವಜನಿಕ ಶೌಚಾಲಯವನ್ನು ಗ್ರಾಮಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದರೂ, ಈ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿನ ಎಲ್ಲ ನಾಲ್ಕು ಶೌಚಾಸನಗಳಲ್ಲಿ ಕಸ ಮೆತ್ತಿಕೊಂಡಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ, ಈ ವಿಚಿತ್ರ ಸಾರ್ವಜನಿಕ ಶೌಚಾಲಯವನ್ನು ಯಾಕೆ ವಿಶ್ವದ 8ನೇ ಅದ್ಭುತವೆಂದು ಘೋಷಿಸಬಾರದು ಎಂದು ಅಮೇಥಿ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾಡಿದೆ. ಈ ಘಟನೆಗೆ ಉತ್ತರದಾಯಿತ್ವವನ್ನು ಆಗ್ರಹಿಸಿರುವ ಕಾಂಗ್ರೆಸ್ ಈ ಲೋಪಕ್ಕೆ ಗುತ್ತಿಗೆದಾರ, ಅಧಿಕಾರಿಗಳು ಅಥವಾ ಕೇಂದ್ರ ಸಚಿವರೇ ಕಾರಣವೇ ಎಂದು ಪ್ರಶ್ನಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕಾಂತ್ ಯಾದವ್, ಈ ಸಾರ್ವಜನಿಕ ಶೌಚಾಲಯಗಳು ಹಳತಾಗಿದ್ದು, ಹೊಸ ಸಾರ್ವಜನಿಕ ಶೌಚಾಲಯವನ್ನು ಗ್ರಾಮದ ಬೇರೆ ಕಡೆ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಹಳತಾದ ಸಾರ್ವಜನಿಕ ಶೌಚಾಲಯದಿಂದ ಶೌಚಾಸನಗಳನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದ್ದರೂ, ಯೋಜನೆಯಂತೆ ಈ ಆದೇಶ ಕಾರ್ಯಗತವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...