ಉತ್ತರ ಪ್ರದೇಶ | ಅಮೇಥಿಯಲ್ಲಿ ಅಡ್ಡಗೋಡೆಯಿಲ್ಲದೆ ಶೌಚಾಲಯ ನಿರ್ಮಾಣ; ವಿಡಿಯೋ ವೈರಲ್

Date:

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಲೋಕಸಭಾ ಕ್ಷೇತ್ರವಾದ ಅಮೇಥಿಯಲ್ಲಿ ಯಾವುದೇ ಅಡ್ಡ ಗೋಡೆ ನಿರ್ಮಿಸದೆ ಒಂದರ ಪಕ್ಕ ಒಂದರ ಹಾಗೆ ನಾಲ್ಕು ಸಾರ್ವಜನಿಕ ಶೌಚಾಲಯ ನಿರ್ಮಿಸಿರುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯು ಅಮೇಥಿಯ ಜಗದೀಶು‌ ಬ್ಲಾಕ್‌ನ ಕಟೇ ಗ್ರಾಮದಿಂದ ವರದಿಯಾಗಿದ್ದು, ಇಲ್ಲಿನ ಸಾರ್ವಜನಿಕ ಶೌಚಾಲಯವನ್ನು ಭಾರೀ ಮೊತ್ತ ವ್ಯಯಿಸಿ ನಿರ್ಮಿಸಲಾಗಿದೆ. ಈ ಸಾರ್ವಜನಿಕ ಶೌಚಾಲಯವನ್ನು ಗ್ರಾಮಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದರೂ, ಈ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿನ ಎಲ್ಲ ನಾಲ್ಕು ಶೌಚಾಸನಗಳಲ್ಲಿ ಕಸ ಮೆತ್ತಿಕೊಂಡಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ, ಈ ವಿಚಿತ್ರ ಸಾರ್ವಜನಿಕ ಶೌಚಾಲಯವನ್ನು ಯಾಕೆ ವಿಶ್ವದ 8ನೇ ಅದ್ಭುತವೆಂದು ಘೋಷಿಸಬಾರದು ಎಂದು ಅಮೇಥಿ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾಡಿದೆ. ಈ ಘಟನೆಗೆ ಉತ್ತರದಾಯಿತ್ವವನ್ನು ಆಗ್ರಹಿಸಿರುವ ಕಾಂಗ್ರೆಸ್ ಈ ಲೋಪಕ್ಕೆ ಗುತ್ತಿಗೆದಾರ, ಅಧಿಕಾರಿಗಳು ಅಥವಾ ಕೇಂದ್ರ ಸಚಿವರೇ ಕಾರಣವೇ ಎಂದು ಪ್ರಶ್ನಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕಾಂತ್ ಯಾದವ್, ಈ ಸಾರ್ವಜನಿಕ ಶೌಚಾಲಯಗಳು ಹಳತಾಗಿದ್ದು, ಹೊಸ ಸಾರ್ವಜನಿಕ ಶೌಚಾಲಯವನ್ನು ಗ್ರಾಮದ ಬೇರೆ ಕಡೆ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಹಳತಾದ ಸಾರ್ವಜನಿಕ ಶೌಚಾಲಯದಿಂದ ಶೌಚಾಸನಗಳನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದ್ದರೂ, ಯೋಜನೆಯಂತೆ ಈ ಆದೇಶ ಕಾರ್ಯಗತವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ...

ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ...

ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ...

EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ...