WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

Date:

ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್)-2024ರ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಮಹಿಳಾ ತಂಡವು ಭರ್ಜರಿ ಗೆಲುವು ಸಾಧಿಸಿ, ಕಪ್‌ ಪಡೆದುಕೊಂಡಿದೆ. ಆರ್‌ಸಿಬಿ ಗೆಲುತ್ತಿದ್ದಂತೆ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿರುವ ವಿಜಯ್ ಮಲ್ಯ ಪ್ರತ್ಯಕ್ಷವಾಗಿದ್ದಾರೆ. ಮಹಿಳಾ ತಂಡವನ್ನು ಅಭಿನಂದಿಸಿ ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿದ್ದಾರೆ.

ಆರ್‌ಸಿಬಿ ಪುರುಷ ತಂಡವು ಈವರೆಗೂ ಐಪಿಎಲ್‌ನಲ್ಲಿ ಕಪ್ ಗೆದ್ದಿಲ್ಲ. ಆದರೆ, ಮಹಿಳಾ ತಂಡವು ಎರಡನೇ ಸೀಸನ್‌ನಲ್ಲೇ ‘ಈ ಸಲ ಕಪ್‌ ನಮ್ದೇ’ ಎಂದಿದ್ದು, ಗೆದ್ದು ಬೀಗಿದ್ದಾರೆ. ಸ್ಮೃತಿ ಮಂದಣ್ಣ ನಾಯಕತ್ವದ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಎದುರು ಭರ್ಜರಿ ಜಯ ಸಾಧಿಸುತ್ತಿದ್ದಂತೆ ಆರ್‌ಸಿಬಿ ಪುರುಷ ತಂಡದ ಈ ಹಿಂದಿನ ಮಾಲೀಕ ವಿಜಯ್ ಮಲ್ಯ ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ತಂಡಕ್ಕೆ ಅಭಿನಂದಿಸಿದ್ದಾರೆ.

“ಡಬ್ಲ್ಯೂಪಿಎಲ್‌ ಗೆದ್ದ ಆರ್‌ಸಿಬಿ ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಐಪಿಎಲ್‌ನಲ್ಲಿ ಆರ್‌ಸಿಬಿ ಪುರುಷರ ತಂಡವೂ ಕೂಡಾ ಗೆಲುವು ಸಾಧಿಸಿದ್ದರೆ ಡಬಲ್ ಗೆಲುವಾಗುತ್ತಿತ್ತು. ಶುಭವಾಗಲಿ” ಎಂದು ಉದ್ಯಮಿ ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಜಯ್ ಮಲ್ಯ ಟ್ವೀಟ್ ಮಾಡುತ್ತಿದ್ದಂತೆ ನೆಟ್ಟಿಗರು ಹಾಸ್ಯಾಸ್ಪದವಾಗಿ ಕಾಮೆಂಟ್ ಮಾಡಿದ್ದಾರೆ. “ಆರ್‌ಸಿಬಿ ಪುರುಷರ ತಂಡವು 2024ರ ಸೀಸನ್‌ನಲ್ಲಿ ಗೆಲುವು ಸಾಧಿಸಿದರೆ ನೀವು ಭಾರತಕ್ಕೆ ವಾಪಾಸ್ ಬರುವುದಾಗಿ ನಾವು ಒಪ್ಪಂದ ಮಾಡಿಕೊಳ್ಳೋಣ” ಎಂದು ನೆಟ್ಟಿಗರು ಛೇಡಿಸಿದ್ದಾರೆ.

ಇನ್ನೋರ್ವ ನೆಟ್ಟಿಗ, “ಮಲ್ಯ ಬರೀ ರಜಾದಿನಗಳಲ್ಲಿ ಟ್ವೀಟ್ ಮಾಡುತ್ತಾರೆ” ಎಂದು ಹೇಳಿದರೆ, ಅಧೀರ ಎಂಬವರು, “ಹಾಯ್ ಮಲ್ಯ ಅಂಕಲ್, ಇಂದು ಭಾನುವಾರ ‘ಬ್ಯಾಂಕ್‌’ ರಜೆ” ಎಂದು ಬ್ಯಾಂಕುಗಳಿಗೆ ಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ತೊರೆದು ಹೋದ ವಿಜಯ್ ಮಲ್ಯ ಕಾಳೆದಿದ್ದಾರೆ.

ತಾನು ಕಿಂಗ್‌ಫಿಷರ್‌ನ ಮಾಜಿ ಉದ್ಯೋಗಿ ಎಂದು ಹೇಳಿಕೊಂಡಿರುವ ನೆಟ್ಟಿಗರೊಬ್ಬರು, “ನಿಮಗೆ ಒಳ್ಳೆಯದಾಗಲಿ ಸರ್. ನನ್ನ ಬಾಕಿ ವೇತನಕ್ಕಾಗಿ ನಾನು ಈಗಲೂ ಕಾಯುತ್ತಿದ್ದೇನೆ. ಇಂತೀ ನಿಮ್ಮ ಕಿಂಗ್‌ಫಿಷರ್‌ ಏರ್‌ಲೈನ್ಸ್‌ನ ಮಾಜಿ ಉದ್ಯೋಗಿ” ಎಂದಿದ್ದಾರೆ.

ಭಾರತದಲ್ಲಿ ಆರ್ಥಿಕ ಅಪರಾಧಿಯಾಗಿರುವ ವಿಜಯ್ ಮಲ್ಯ ಭಾರತದಿಂದ ಪಲಾಯನವಾಗಿ ಯುಕೆಯಲ್ಲಿದ್ದಾರೆ. 2012 ರಿಂದ ಹಣಕಾಸಿನ ಹಗರಣಗಳನ್ನು ನಡೆಸಿರುವ ವಿಜಯ್ ಮಲ್ಯ ಸಾಲವಿದ್ದರೂ ಐಷಾರಾಮಿ ಜೀವನ ನಡೆಸುತ್ತಿದ್ದು, ಭಾರತದ ಬ್ಯಾಂಕ್‌ಗಳಿಗೆ ವಂಚಿಸಿ ಪರಾರಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...