ವಿಜಯನಗರ | ಹಂಪಿಯಲ್ಲಿ 17 ಹೋಮ್‌ಸ್ಟೇ, ರೆಸಾರ್ಟ್‌ಗಳು ನೆಲಸಮ

Date:

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 9ರಿಂದ ಜಿ-20 ಶೃಂಗಸಭೆ ನಡೆಯಲಿದೆ. ಅದಕ್ಕಾಗಿ 47 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ರಾಜ್ಯ ಸರ್ಕಾರ, ಹಲವಾರು ಕೆಲಸಗಳನ್ನು ಕೈಗೆತ್ತಿಕೊಂಡಿದೆ. ಈ ನಡುವೆ, ಹಂಪಿ ಪಾರಂಪರಿಕ ವಲಯದಲ್ಲಿದ್ದ 17 ರೆಸ್ಟೋರೆಂಟ್‌ಗಳು ಮತ್ತು ರೆಸಾರ್ಟ್‌ಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ರಕ್ಷಿತ ಅರಣ್ಯ ಪ್ರದೇಶ ವಲಯ ಮತ್ತು ಯುನೆಸ್ಕೋ ಅಡಿಯಲ್ಲಿ ಪಾರಂಪರಿಕ ತಾಣವೆಂದು ಗುರುತಿಸಲಾಗಿದ್ದ ಪ್ರದೇಶದಲ್ಲಿ ನಡೆಯುತ್ತಿದ್ದ ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳನ್ನು ತೆರವುಗೊಳಿಸಿದ್ದಾರೆ. ಇವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಮೂರು ತಿಂಗಳ ಹಿಂದೆಯೇ ನೋಟಿಸ್‌ ನೀಡಿದ್ದರು. ಆದರೂ, ಅವುಗಳ ಮಾಲೀಕರು ತೆರವುಗೊಳಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳೇ ಬುಲ್ಡೋಜರ್‌ ಬಳಸಿ ನೆಲಸಮ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೊಪ್ಪಳ ಜಿಲ್ಲೆಯ ಸಣಾಪುರ, ಆನೆಗುಂದಿ ಹಾಗೂ ವಿಜಯನಗರ ಜಿಲ್ಲೆಯ ಕಮಲಾಪುರ, ಕಡ್ಡಿರಾಂಪುರ ಭಾಗದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹಲವಾರು ಜನರು ತಮ್ಮ ಮನೆಗಳ ಎದುರು ಕಟ್ಟಿಕೊಂಡಿದ್ದ ಆತಿಥ್ಯ ಕಟ್ಟಡಗಳನ್ನೂ ನೆಲಸಮ ಮಾಡಲಾಗಿದೆ ಎಂದು ಟಿಎನ್‌ಐಇ ವರದಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪಾರಂಪರಿಕ ವಲಯದಲ್ಲಿ ಯಾವುದೇ ಕಟ್ಟಡಗಳನ್ನು ನಿರ್ಮಾಣ ಮಾಡುವಂತಿಲ್ಲ. ಆದರೆ, ನೆಲಸಮಗೊಂಡಿರುವ ಎಲ್ಲ ಕಟ್ಟಡಗಳು ಹಂಪಿ ಪಾರಂಪರಿಕ ವಲಯದಲ್ಲಿದ್ದವು. ಹೀಗಾಗಿ, ಅವುಗಳನ್ನು ನೆಲಸಮ ಮಾಡಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೆಲಸಮವಾದ ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ಸರ್ಕಾರ ಪರ್ಯಾಯ ಭೂಮಿಯನ್ನು ಸೂಚಿಸಿದೆ. ಅಲ್ಲಿ, ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ?: ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

ಈ ಹಿಂದೆಯೂ ಅಧಿಕಾರಿಗಳು ಹಂಪಿ ಸುತ್ತಮುತ್ತಲಿನ ಸುಮಾರು 40 ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳನ್ನು ನೆಲಸಮ ಮಾಡಿದ್ದರು. ಆ ವೇಳೆ, ಅಧಿಕಾರಿಗಳ ವಿರುದ್ಧ ಸ್ಥಳೀಯರು ಮತ್ತು ರೆಸಾರ್ಟ್‌ಗಳ ಮಾಲೀಕರು ಪ್ರತಿಭಟನೆ ನಡೆಸಿದ್ದರು.

“ಹೋಮ್‌ಸ್ಟೇಗಳು, ರೆಸಾರ್ಟ್‌ಗಳು ಹಾಗೂ ರೆಸ್ಟೋರೆಂಟ್‌ಗಳು ತಾತ್ಕಾಲಿಕ ಕಟ್ಟಡಗಳಾಗಿವೆ. ಪ್ರವಾಸಿಗರಿಗೆ ತಂಗಲು, ವಿಶ್ರಾಂತಿ ಪಡೆಯಲು ನೆರವಾಗುತ್ತವೆ. ಅಲ್ಲದೆ, ಸ್ಥಳೀಯರಿಗೆ ಉದ್ಯೋಗವನ್ನೂ ನೀಡಿವೆ. ಆದರೆ, ಅಧಿಕಾರಿಗಳು ಅವುಗಳನ್ನು ನೆಲಸಮ ಮಾಡುತ್ತಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಮಾಡಬೇಕು” ಎಂದು ರೆಸಾರ್ಟ್‌ಗಳ ಮಾಲೀಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ...