ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

Date:

  • ಗ್ರಾಮ ಲೆಕ್ಕಿಗರನ್ನು ಹುಡುಕುವುದೇ ಜನರಿಗೆ ತಲೆ ನೋವಾಗಿದೆ
  • ಗ್ರಾಮ ಪಂಚಾಯ್ತಿಯಲ್ಲೇ ಪ್ರತ್ಯೇಕ ಕೊಠಡಿ ಇರುವಂತೆ ಕ್ರಮ

ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಗ್ರಾಮ‌ ಲೆಕ್ಕಿಗರು ಇನ್ಮುಂದೆ ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.‌

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು” ಎಂದರು.

ಸಭೆಯಲ್ಲಿ ಸಿಎಂ ನೀಡಿದ ಉಳಿದ ಸೂಚನೆಗಳು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
  • ಸರ್ವೇಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ ಕೈಗೊಳ್ಳಬೇಕು. ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಬೇಕು.
  • ಕಂದಾಯ ಇಲಾಖೆಯಲ್ಲಿ ಕಡತಗಳು ಆನ್‌ಲೈನ್‌ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು. ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೇವಾರಿ ಮಾಡಬೇಕು. ನಿಗದಿತ ಅವಧಿಯೊಳಗೆ ಜೋಡಿ ಗ್ರಾಮಗಳ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು.
  • ಬೆಂಗಳೂರು ನಗರ ಸುತ್ತಮುತ್ತ green belt ಪ್ರದೇಶದಲ್ಲಿ ಅನಧಿಕೃತ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಹಕಾರ ನೀಡುತ್ತಿರುವ ಪಿಡಿಒ, ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅನಧಿಕೃತ ಬಡಾವಣೆಗಳ ನಿರ್ಮಾಣ ವಿಷ ವರ್ತುಲವಿದ್ದಂತೆ. ಜಿಲ್ಲಾಧಿಕಾರಿಗಳು, ಸಿಇಓಗಳು ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು.

ಈ ಸುದ್ದಿ ಓದಿದ್ದೀರಾ? ಭಾರತದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ಮೋದಿ: ವಿ ಎಸ್‌ ಉಗ್ರಪ್ಪ ಕಿಡಿ

  • ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಗಮನ ಹರಿಸಬೇಕು. ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಲೇಬಾರದೆಂದು ಅಧಿಕಾರಿಗಳು ತೀರ್ಮಾನಿಸಬೇಕು.
  • ಬೆಂಗಳೂರು ಸುತ್ತಮುತ್ತ ಹಸಿರು ವಲಯದಲ್ಲಿ ಖಾಸಗಿ ವ್ಯಕ್ತಿಗಳು ಬಡಾವಣೆಗಳನ್ನು ಮಾಡಿ, ನಿವೇಶನಗಳನ್ನು ಹಂಚಿಕೆ ಮನೆ ಕಟ್ಟಿಕೊಂಡಿದ್ದಾರೆ. ಇದನ್ನು ಪಿಡಿಓ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳ ಸಹಕಾರ ಇಲ್ಲದ ಮಾಡಲು ಸಾಧ್ಯವಿಲ್ಲ. ಇದು ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು.
  • ಜಿಲ್ಲೆಗಳಲ್ಲಿ ರೆವೆನ್ಯೂ ಬಡಾವಣೆಗಳಿಗೆ ಅವಕಾಶ ನೀಡಬಾರದು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಕ್ರಮ ಬಡಾವಣೆಗಳ ಸಮಸ್ಯೆ ಕುರಿತು ಪ್ರತ್ಯೇಕ ಸಭೆ ನಡೆಸುವ ಅಗತ್ಯವಿದೆ. ಇತರ ಜಿಲ್ಲೆಗಳಲ್ಲಿ ಇದಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಅಧಿಕಾರಿಗಳು ಗಂಭೀರ ಸ್ವರೂಪದ ತಪ್ಪುಗಳನ್ನೆಸಗಿದಾಗ ಕ್ರಿಮಿನಲ್‌ ಪ್ರಕರಣಗಳನ್ನೇ ದಾಖಲಿಸಲು ಸೂಚಿಸಲಾಯಿತು.
  • ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಿದ್ದಾಗ, ಪೋಡಿಮುಕ್ತ ಗ್ರಾಮ ಅಭಿಯಾನ ನಡೆಸಿದ್ದರು. ಅದರ ಸ್ಥಿತಿಗತಿ ಏನು? 30,715 ಗ್ರಾಮಗಳಿವೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ 16,850 ಗ್ರಾಮಗಳು ಪೋಡಿ ಮುಕ್ತ ಗ್ರಾಮಗಳಾಗಿವೆ. ಉಳಿದೆಡೆ ಕ್ರಮ ಆಗಬೇಕಿದೆ. 14,000 ಗ್ರಾಮಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈ ಅಭಿಯಾನವನ್ನು ಮತ್ತೆ ಕೈಗೆತ್ತಿಕೊಳ್ಳಬೇಕು.
  • 3,292 ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ರೂಪಿಸುವ ನಿಟ್ಟಿನಲ್ಲಿ 812 ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಲು ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಈ ಪ್ರಕ್ರಿಯೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಿದರು. ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೀವಾರಿ ಮಾಡಬೇಕು.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ; ಚಿಕಿತ್ಸೆಗಾಗಿ ಸ್ಥಳೀಯರ ಪರದಾಟ

ಸರ್ಕಾರ ಸುಸಜ್ಜಿತ ಆರೋಗ್ಯ ಉಪಕೇಂದ್ರಗಳನ್ನು ನಿರ್ಮಿಸಿದ್ದರೂ, ವೈದ್ಯರು ಲಭ್ಯವಿಲ್ಲದ ಕಾರಣ ಹುಣಶ್ಯಾಳ...

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ; ‘ಏನೇನೋ ಅಂದ್ಕೊಬೇಡಿ’ ಎಂದ ನಟ ದರ್ಶನ್

ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ...

ಕರಾವಳಿಯಲ್ಲಿ ಹೊಸ ಸಂಚಲನ; ಕೋಮುವಾದದ ವಿರುದ್ಧ ಬ್ರಾಹ್ಮಣ ಸಮುದಾಯ

ಬ್ರಾಹ್ಮಣರೆಲ್ಲರೂ ಬಿಜೆಪಿಗರು ಮತ್ತು ಕೋಮುವಾದಿಗಳು ಎಂಬ ಹಣೆಪಟ್ಟಿಯ ವಿರುದ್ದ ಮುಖಂಡರು ಸಂದೇಶ...

ರಾಯಚೂರು | ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ; ಬಿಜೆಪಿ ಅಭ್ಯರ್ಥಿ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯ್ಕ ಅವರ...