ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಹಾಗೂ ಸೌಹಾರ್ದತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ನನ್ನು ಕೂಡಲೇ ಬಂಧಿಸಬೇಕು. ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ ಆಗ್ರಹಿಸಿದೆ.
ಕಲಬುರಗಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಜಿಲ್ಲಾ ಸಮಿತಿಯ ಕಾರ್ಯಕರ್ತರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಸಿಪಿಐಎಂ ಜಿಲ್ಲಾ ಕಾರ್ಯಾದರ್ಶಿ ಕೆ.ನೀಲಾ ಮಾತನಾಡಿ, “ಕಳೆದೆರಡು ದಿನಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ನಡೆದ ಸಮಾವೇಶವನ್ನುದ್ದೇಶಿಸಿ ಮುಸ್ಲಿಂ ಮಹಿಳೆಯರನ್ನು ಅವಹೇಳನಕಾರಿಯಾಗಿ ನಿಂದಿಸಿ ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಈ ಹೇಳಿಕೆ ಅವರ ಕೀಳುತನದ ಮಟ್ವವನ್ನು ತೋರ್ಪಡಿಸುತ್ತದೆ ಇದು ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರ ರಾಜ್ಯದ ಸೌಹಾರ್ದತೆಗೆ ಗಂಭೀರ ಧಕ್ಕೆ ತರುತ್ತಿರುವ ಮತ್ತು ಅಲ್ಪಸಂಖ್ಯಾತರನ್ನು ಅವಾಚ್ಯವಾಗಿ ನಿಂದಿಸುತ್ತಿರುವ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದಿರುವುದು ನಾಚಿಕೆಗೇಡು, ಸರಕಾರದ ದಿವ್ಯ ಮೌನವು ಇಂತಹ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳಿಗೆ ಸಂಬಂಧಿಸಿ ಅದರ ಸಮ್ಮತಿಯಂತೆ ಕಂಡು ಬರುತ್ತಿದೆ ಎಂದು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಬಿಎಸ್ಎಸ್ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ
ಈ ಸಂದರ್ಭದಲ್ಲಿ ಸಿಪಿಐ ರಾಜ್ಯ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಪ್ರಕಾಶ, ಎಚ್.ಆರ್. ನವಿನಕುಮಾರ, ಟಿ.ಯಶ್ವಂತ, ಬಸವರಾಜ ಪೂಜಾರ, ಮುನಿ ವೆಂಕಟಪ್ಪಾ, ಎಂ.ಬಿ. ಸಜ್ಜನ, ಭಿಮಶೇಟ್ಟಿ ಯಂಪಳ್ಳಿ, ಗೌರಮ್ಮಾ ಪಿ ಪಾಟೀಲ್, ಶಾಂತಾ ಎನ್. ಘಂಟೆ, ಸುನಿಲ್ ಕುಮಾರ ಬಜಾಲ್, ಸುರೇಶ ಕಲ್ಲಾಗರ, ಮೀನಾಕ್ಷಿ ಬಾಳಿ, ಸಾಯಬಣ್ಣ ಗುಡುಬಾ, ಬಿ.ಎಂ.ಭಟ್, ಸಿ ಕುಮಾರಿ, ಪದ್ಮಿನಿ ಕಿರಣಗಿ, ಸಿದ್ದು ಹರವಾಳ, ಶ್ರೀಮಂತ ಬಿರಾದಾರ, ನಾಗಯ್ಯ ಸ್ವಾಮಿ, ಶರಣಬಸಪ್ಪಾ ಮಮಶೆಟ್ಟಿ ಸೇರಿದಂತೆ ಹಲವರು ಇದ್ದರು.