ಕುಡಿಯುವ ನೀರಿನ ಅಭಾವ | ಬಿಜೆಪಿಯವರು ಟೀಕೆ ಬಿಟ್ಟು ರಚನಾತ್ಮಕ ಸಲಹೆ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Date:

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ. ಅವರು ರಚನಾತ್ಮಕ ಸಲಹೆ ಕೊಟ್ಟರೆ ನಾವು ಸ್ವೀಕರಿಸಲು ಸಿದ್ಧ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಟ್ಯಾಂಕರ್ ಹಾಗೂ ಖಾಸಗಿಯವರನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಮಾಫಿಯಾ ತಡೆಗಟ್ಟಿದ್ದೇವೆ. ಶೇಕಡಾ 50ರಷ್ಟು ಕೊಳವೆಬಾವಿಗಳು ಬರಿದಾಗಿದೆ. ಸಾವಿರಾರು ಟ್ಯಾಂಕ ಗಳನ್ನು ನಾವು ನಿಯಂತ್ರಣಕ್ಕೆ ತೆಗೆದುಕೊಂಡು ನೀರಿನ ಮೂಲಗಳಿರುವ ಕಡೆಗಳಿಂದ ನೀರನ್ನು ಪೂರೈಸಲು ನಿರ್ಧರಿಸಲಾಗಿದೆ.

“ದೂರದಿಂದ ನೀರು ಪೂರೈಸುವ ಕಾರಣ ಟ್ಯಾಂಕರ್ ನೀರಿನ ದರ ನಿಗಧಿಯ ನಿರ್ಧಾರವನ್ನು ಅಧಿಕಾರಿಗಳಿಗೆ ಬಿಟ್ಟಿದ್ದೇವೆ. ಇನ್ನು ರಾಜ್ಯದಲ್ಲಿ ಖಾಲಿ ಇರುವ ದೊಡ್ಡ ಹಾಲಿನ ಟ್ಯಾಂಕರ್ ಗಳನ್ನ ನೀರು ಪೂರೈಸಲು ಬಳಸಲಾಗುವುದು. ಕಾವೇರಿ ನೀರನ್ನು ಸಮರ್ಪಕವಾಗಿ ಪೂರೈಸಲಾಗುತ್ತಿದೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೊಳವೆ ಬಾವಿಗಳು ಬತ್ತಿದಾಗ ಆಹಾಕಾರಾ ಉದ್ಭವಿಸುತ್ತದೆ. ನಾವು ನೀರು ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಈ ಪರಿಸ್ಥಿತಿಯಲ್ಲಿ ಕುಡಿಯುವ ನೀರನ್ನು ಕಾರು ವಾಹನ ತೊಳೆಯಲು ಹಾಗೂ ಇತರೆ ಬಳಕೆಗೆ ಬಳಸಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇವೆ. ನೀರಿನ ಬೆಲೆ ಎಲ್ಲರಿಗೂ ಅರ್ಥವಾಗಬೇಕು” ಎಂದು ಡಿಸಿಎಂ ತಿಳಿಸಿದರು.

ಇದನ್ನು ಓದಿದ್ದೀರಾ? ಗಾಂಧಿ ಅಥವಾ ಗೋಡ್ಸೆ| ಉತ್ತರಿಸಲು ಸಮಯ ಬೇಕೆಂದ ಇತ್ತೀಚೆಗೆ ಬಿಜೆಪಿ ಸೇರಿದ ನ್ಯಾಯಾಧೀಶ!

“ಖಾಸಗಿ ಟ್ಯಾಂಕರ್ ಗಳು ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸುತ್ತಿವೆ. ಸರ್ಕಾರದ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಪೂರೈಸಲಾಗುತ್ತಿದೆ. ದುರಸ್ತಿ ಇದ್ದ ಘಟಕಗಳನ್ನು ರಿಪೇರಿ ಮಾಡುತ್ತಿದ್ದೇವೆ. ಇನ್ನು ಮೂರ್ನಾಲ್ಕು ತಿಂಗಳು ಈ ಸಮಸ್ಯೆ ಇರುತ್ತವೆ. ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....