ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿದೆ. ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ಆಧ್ಯತೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.
ನೀರಿನ ಸಮಸ್ಯೆಯ ಬಗ್ಗೆ ಮಾತನಾಡಿರುವ ಅವರು, “ಭೀಮಾ ನದಿಯಲ್ಲಿ ನೀರು ಬತ್ತಿಹೋಗಿದೆ. ಸನ್ನತಿ ಬ್ಯಾರೇಜ್ನಿಂದ ಎರಡು ದಿನಗಳ ಹಿಂದೆ 1,400 ಕ್ಯೂಸೆಕ್ ನೀರು ಹರಿಸಲಾಗಿದೆ. ಯಾದಗಿರಿ ನಗರ, ಗುರುಮಠಕಲ್ ಪಟ್ಟಣ ಸೇರಿದಂತೆ ಉಭಯ ತಾಲೂಕಿನ ನೂರಾರು ಹಳ್ಳಿಗಳ ಜನ ಜಾನುವಾರುಗಳಿಗೆ ಕುಡಿವ ನೀರು ಲಭಿಸುವಂತಾಗಬೇಕು” ಎಂದು ಒತ್ತಾಯಿಸಿದ್ದಾರೆ.
“ಈಗಾಗಲೇ ಮುಂಗಾರು ವೈಫಲ್ಯವಾಗಿ ಒಂದುವರೆ ತಿಂಗಳಾಗುತ್ತಿದ್ದರೂ ಜಿಲ್ಲಾಡಳಿತ ಭೀಮಾ ನದಿ ಪಾತ್ರದ ರೈತರನ್ನು ಕರೆದು ಸಭೆ ಮಾಡಿಲ್ಲ. ಕೃಷಿ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಬೇಜವಬ್ದಾರಿಯಿಂದ ವರ್ತಿಸಿರುವುದರಿಂದ ಇಡಿ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ತೆಲೆದೋರುವ ಸಾಧ್ಯತೆ ಇದೆ” ಎಂದು ಅವರು ಆರೋಪಿಸಿದ್ದಾರೆ.